News Karnataka Kannada
Friday, May 10 2024
ಮಂಗಳೂರು

ಮೂಡುಬಿದಿರೆ: ಇಡೀ ಜಗತ್ತಿನ ಜೈನರಿಗೆ ಅತ್ಯಂತ ಪವಿತ್ರ ಸ್ಥಳವಾದ ಸಮ್ಮೇದ ಶಿಖರ್ಜಿ

Mng
Photo Credit : News Kannada

ಮೂಡುಬಿದಿರೆ: ಇಡೀ ಜಗತ್ತಿನ ಜೈನರಿಗೆ ಅತ್ಯಂತ ಪವಿತ್ರ ಸ್ಥಳವಾದ ಸಮ್ಮೇದ ಶಿಖರ್ಜಿಯನ್ನು ಅಲ್ಲಿನ ಜಾರ್ಖಂಡ್ ರಾಜ್ಯ ಸರಕಾರ ಪವಾಸಿ ತಾಣ ಮಾಡಲು ಆದೇಶಿಸಿದೆ. ಜೈನ ಸಂಪ್ರದಾಯದಂತೆ ಈ ಕ್ಷೇತ್ರವು ಭೂತಕಾಲ-ವರ್ತಮಾನ ಮತ್ತು ಭವಿಷ್ಯತ್‌ ಕಾಲದ ಎಲ್ಲಾ ತೀರ್ಥ೦ಕರರು ಸಾಧನೆ ಮಾಡಿ ಮೋಕ್ಷ ಪ್ರಾಪ್ತಿ ಮಾಡಿಕೊಳ್ಳುವ ಶಾಶ್ವತ ಸಿದ್ಧಕ್ಷೇತ್ರವಾಗಿರುತ್ತದೆ. ವರ್ತಮಾನ ಕಾಲದ 24 ತೀರ್ಥಂಕರರ ಪೈಕಿ 20 ಜನ ತೀರ್ಥಂಕರರು ಈ ಬೆಟ್ಟದ ಮೇಲೆ ಪುರುಷಾರ್ಥ ಮಾಡಿ ಸಿದ್ಧಪದವಿ ಪ್ರಾಪ್ತಿ ಮಾಡಿರುತ್ತಾರೆ. ದಿನಂಪ್ರತಿ ಸಾವಿರಾರು ಜನ ಜೈನರು ಭಕ್ತಿ ಶ್ರದ್ಧೆಯಿಂದ ಈ ಕ್ಷೇತ್ರದ ದರ್ಶನ ಮಾಡಿ ಪುಣ್ಯಪ್ರಾಪ್ತಿ ಮಾಡಿಕೊಳ್ಳುತ್ತಾರೆ. ದಿಗಂಬರ ಮತ್ತು ಶ್ವೇತಾಂಬರ ಪಂಥದ ಮುನಿಗಳು, ಆರ್ಯಿಕೆಯರು, ಕ್ಷುಲ್ಲಕರು ಮತ್ತು ಐಲಕರು ಕೂಡಾ ಇಂದಿಗೂ ಅಲ್ಲಿನ ದರ್ಶನ ಮಾಡಿ ಜನ್ಮ ಸಾರ್ಥಕ ಮಾಡುತ್ತಿದ್ದಾರೆ.

ಸುಮಾರು 9 ಕಿ.ಮೀ ನಡೆದು ಬೆಟ್ಟವನ್ನು ಏರಿ ಕಿ.ಮೀ ಪ್ರದೇಶದಲ್ಲಿರುವ ಚರಣ 9 ಪಾದುಕೆಗಳನ್ನು ದರ್ಶನ ಮಾಡಿ 9 ಕಿ.ಮೀ ಇಳಿದು ಒಂದೇ ದಿನದಲ್ಲಿ ತೀರ್ಥ ಕ್ಷೇತ್ರದ ದರ್ಶನವನ್ನು ಕಾಲ್ನಡಿಗೆಯಿಂದ ಮಾಡಬೇಕಾಗಿದೆ.

ಅದಿವಾಸಿಗಳಿಂದ ತುಂಬಿದ ಅಲ್ಲಿನ ಸ್ಥಳೀಯ ಜನರು ಕೂಡ ಈ ತೀರ್ಥ ಕ್ಷೇತ್ರಕ್ಕೆ ಭಕ್ತಿಯಿಂದ ನಡೆದುಕೊಳ್ಳುತ್ತಿರುವುದು ವಿಶೇಷ.

ಜಾರ್ಖಂಡ್ ರಾಜ್ಯ ಸರಕಾರದ ಈ ನಿಲುವಿನಿಂದ ಅಲ್ಪಸಂಖ್ಯಾತ ಜೈನರ ಭಾವನೆಗಳಿಗೆ ಧಕ್ಕೆ ಜೈನರ ಮೇಲಿನ ದಬ್ಬಾಳಿಕೆಯನ್ನು ನಿಲ್ಲಿಸಿ ಅನಾದಿಕಾಲದಿಂದ ಇರುವ ಪುಣ್ಯಭೂಮಿಯ ಪಾವಿತ್ರ್ಯತೆಯನ್ನು ರಕ್ಷಿಸಿ ಈ ಹಿಂದಿನ ಹಾಗೆ ಜೈನರ ಶಾಶ್ವತ ಕ್ಷೇತ್ರವಾಗಿ ಮುಂದಕ್ಕೂ ಅವಕಾಶ ಮಾಡಿಕೊಡುವಂತೆ ಮತ್ತು ಈಗಾಗಲೇ ಪ್ರವಾಸಿ ತಾಣವನ್ನಾಗಿ ಮಾಡಲು ಉದ್ದೇಶಿಸಿರುವ ಅಧಿಸೂಚನೆಯನ್ನು ಹಿಂಪಡೆಯುವಂತೆ ಭಾರತದ ರಾಷ್ಟ್ರಪತಿಗಳಿಗೆ, ಪ್ರಧಾನಮಂತ್ರಿಗಳಿಗೆ ಹಾಗೂ ಜಾರ್ಖಂಡ್‌ ರಾಜ್ಯ ಸರಕಾರಕ್ಕೆ ಒತ್ತಾಯ ಮಾಡುವರೇ ಮೌನಮೆರವಣಿಗೆಯನ್ನು ಆಯೋಜಿಸಲಾಗಿದೆ.

ಜೈನಕಾಶಿ ಮಾಡಬಿದಿರೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಶ್ರಾವಕ-ಶ್ರಾವಿಕೆಯರು ಒಟ್ಟು ಸೇರಿ ಮೂಡಬಿದಿರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ಮತ್ತು ಕಾರ್ಕಳ ಶ್ರೀ ಜೈನ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ತಾಲೂಕು ಆಡಳಿತದ ಮುಖ್ಯಸ್ಥರ ಮೂಲಕ ನಮ್ಮ ಹಕ್ಕೊತ್ತಾಯನ್ನು ಸಲ್ಲಿಸುವರೇ ದಿನಾಂಕ 28-12-20225 ಬುಧವಾರ ಬೆಳಿಗ್ಗೆ ವಿಶ್ವಪ್ರಸಿದ್ಧ ತಿಭುವನತಿಲಕ ಚೂಡಾಮಣಿ ಬಸದಿಯಿಂದ(ಸಾವಿರಕಂಬದ ಬಸದಿ) ಮೌನ ಮೆರವಣಿಗೆಯನ್ನು ಮೂಡುಬಿದಿರೆ ಸ್ವರಾಜ್ಯ ಮೈದಾನದ ತನಕ ಹಮ್ಮಿಕೊಳ್ಳಲಾಗಿದೆ.

“ಸಮ್ಮೇದ ಶಿಖರ್ಜಿ ಬಚಾವೋ” ಎಂಬ ಶೀರ್ಷಿಕೆಯೊಂದಿಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ೧ ಎಲ್ಲಾ ಧರ್ಮಬಂಧುಗಳು ಸೇರಿ ಪವಿತ್ರ ತೀರ್ಥಕ್ಷೇತ್ರಗಳನ್ನು ಮೋಜು-ಮಸ್ತಿ ಕೇಂದ್ರಗಳನ್ನಾಗಿ ಪರಿವರ್ತಿಸದಂತೆ ಒತ್ತಾಯಿಸಿ ಭಾರತದ ಪ್ರಧಾನ ಮಂತ್ರಿಯವರಿಗೆ ಅಂತರ್ದೇಶೀಯ ಪತ್ರ ಬರೆಯುವ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತಾರೆ ಎಂದು ಕೆ.ಅಭಯಯಚಂದ್ರ ಜೈನ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಪುಷ್ಪರಾಜ ಜೈನ್, ಪ್ರವೀಣ್‌ಚಂದ್ರ ಜೈನ್, ಸುದರ್ಶನ ಜೈನ್, ಯುವರಾಜ ಜೈನ್, ಪದ್ಮಪ್ರಸಾದ ಜೈನ್, ಕೆ.ಕೃಷ್ಣಪ್ರಸಾದ ಹೆಗ್ಡೆ, ಎಂ.ಆದರ್ಶ ಜೈನ್ ಉಪಸ್ಥಿತರಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು