News Karnataka Kannada
Saturday, April 27 2024
ಮಂಗಳೂರು

ಮೂಡುಬಿದಿರೆ: ಬಾವಿಗಿಳಿದು ಚಿರತೆ ಸೆರೆ ಹಿಡಿದ ‘ಯಶಸ್ವಿ’ ವೈದ್ಯೆ

Moodbidri: 'Successful' doctor captures leopard in well with cage
Photo Credit : News Kannada

ಮೂಡುಬಿದಿರೆ: ಎರಡು ದಿನಗಳ ಹಿಂದೆ ಬಾವಿಗೆ ಭಾನುವಾರ ಬಿದ್ದಿದ್ದ ಒಂದು ವರ್ಷ ಪ್ರಾಯದ ಹೆಣ್ಣು ಚಿರತೆ ಮರಿಯನ್ನು ಪಶುವೈದ್ಯೆ ಬೋನಿನೊಳಗಿದ್ದು ಬಾವಿಗಿಳಿದು ರಕ್ಷಿಸಿ ಮೇಲಕ್ಕೆ‌ಎತ್ತಿದ್ದಾರೆ.

ಬಾವಿ ಮೂವತ್ತಡಿಗಿಂತಲೂ ಆಳವಾಗಿದ್ದು ಬಾವಿಯ ಒಳಗೆ ಒಂದು ಬದಿಯಲ್ಲಿದ್ದ ದೊಡ್ಡ ಬಿಲದಲ್ಲಿ ಅಡಗಿಕೊಳ್ಳುತ್ತಿದ್ದ ಈ ಚಿರತೆ ಮರಿ ಅರಣ್ಯ ಇಲಾಖೆಯವರು ಇಳಿಸಿದ ಬೋನಿನೊಳಗೂ ಬರಲೊಪ್ಪುತ್ತಿರಲಿಲ್ಲ. ಆಗ ಇಲಾಖೆಯ ಕರೆ ಮೇರೆಗೆ ಎನ್‌ಜಿಒ ಚಿಟ್ಟೆ ಪಿಲಿ ವೈಲ್ಡ್ ಲೈಫ್ ರೆಸ್‌ಕ್ಯೂ ಸೆಂಟರ್‌ನ ತಜ್ಞ ಪಶುವೈದ್ಯರಾದ ಡಾ. ಯಶಸ್ವಿ, ಡಾ. ಮೇಘನಾ , ಡಾ. ಪೃಥ್ವೀ, ಡಾ. ನಫೀಸಾ ಸ್ಥಳಕ್ಕಾಗಮಿಸಿದರು. ಡಾ. ಮೇಘನಾ ಅವರು ಅರಿವಳಿಕೆ ಲೋಡ್ ಮಾಡಿದ ಡಾರ್ಟ್ ಗನ್ ಹಿಡಿದುಕೊಂಡು ಬೋನಿನೊಳಗೆ ಕುಳಿತರು. ಅರಣ್ಯ ಇಲಾಖೆಯ ಸಿಬ್ಬಂದಿ , ಊರವರು ಸೇರಿಕೊಂಡು ಅವರನ್ನು ಬಾವಿಗಳಿಸಿದರು. ಅಲ್ಲಿ ಅರಿವಳಿಕೆ ಮದ್ದಿನ ಪ್ರಯೋಗ. ಮತ್ತೆ ಅರಣ್ಯ ಇಲಾಖೆಯ ಸಿಬ್ಬಂದಿ ಮೂಲಕ ಚಿರತೆಯನ್ನು ಬೋನಿನೊಳಗೆ ಹಾಕಲಾಯಿತು. ಬಾವಿಯಿಂದ ಮೇಲೆ ಬಂದ ಬಳಿಕ ಪ್ರಜ್ಞೆ ಬರುವ ಚುಚ್ಚು ಮದ್ದು ನೀಡಿ ಅದು ಚೇತರಿಸುತ್ತಿದ್ದಂತೆಯೇ ಅದನ್ನು ಅರಣ್ಯ ಇಲಾಖೆಯವರು ದಟ್ಟ ಕಾಡಿಗೆ ಒಯ್ದು ಬಂಧಮುಕ್ತಗೊಳಿಸಿದರು. ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್., ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ, ಉಪವಲಯ ಅರಣ್ಯಾಧಿಕಾರಿ ಮಂಜುನಾಥ ಗಾಣಿಗ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು