News Karnataka Kannada
Monday, May 20 2024
ಮಂಗಳೂರು

ಮೂಡುಬಿದಿರೆ: ಕಡಲಕೆರೆ ಬಳಿ ಹತ್ತಾರು ಎಕರೆ ಜಾಗ ಬೆಂಕಿಗಾಹುತಿ

Moodbidri: Tens of acres of land gutted in fire near Kadalkere
Photo Credit : News Kannada

ಮೂಡುಬಿದಿರೆ: ಇಲ್ಲಿನ ಒಂಟಿಕಟ್ಟೆ ಕಡಲಕೆರೆಯ ನಿಸರ್ಗಧಾಮದ ಬಳಿ ಹತ್ತು ಎಕರೆಗಿಂತಲೂ ಹೆಚ್ಚಿನ ಸರಕಾರಿ ಮತ್ತು ಖಾಸಗಿ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಕಡಲಕೆರೆ ಅಗ್ನಿಶಾಮಕ ದಳದ ಕಛೇರಿ ಮತ್ತು ವಸತಿ ಗೃಹದ ಸುತ್ತ, ನೆಲ್ಲಿಗುಡ್ಡೆ, ಕಡ್ಲಗುಡ್ಡೆ ಪ್ರದೇಶದಲ್ಲಿ ಬೆಳಿಗ್ಗೆ 11 ಗಂಟೆಯ ವೇಳೆಗೆ ಬೆಂಕಿ ಹೊತ್ತಿ ಉರಿಯಲಾರಂಭಿಸಿದೆ.

ನಿಸರ್ಗಧಾಮದ ಸಾಲು ಮರದ ತಿಮ್ಮಕ್ಕ ಉದ್ಯಾನವನ, ಕಡಲಕೆರೆ ಕೈಗಾರಿಕಾ ಪ್ರದೇಶದ ಬಳಿ ಹೊಗೆ ತುಂಬಿಕೊಂಡಿದೆ. ಅಗ್ನಿಶಾಮಕ ದಳದ ವಸತಿಗೃಹದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಸರಕಾರಿ ಜಾಗವು ಕಾಡು ಪ್ರದೇಶದಿಂದ ಕೂಡಿರುವುದರಿಂದ ಅಗ್ನಿಶಾಮಕ ವಾಹನವು ಒಳ ಹೋಗಿ ಬೆಂಕಿ ನಂದಿಸಲು ಕಷ್ಟವಾಗುತ್ತಿದೆ ಅಲ್ಲದೆ ಅಗ್ನಿಶಾಮಕ ದಳದಲ್ಲಿ ಸಿಬಂಧಿಗಳ ಕೊರತೆಯೂ ಇರುವುದರಿಂದ ಬೆಂಕಿ ನಂದಿಸಲು ಕಷ್ಟಸಾಧ್ಯವಾಗುತ್ತಿದೆ.

ಸಹಾಯಕ ಅಗ್ನಿಶಾಮಕ ಅಧಿಕಾರಿ ಸ್ಟೀಫನ್ ಮತ್ತು ಸಿಬಂಧಿಗಳು ಬೆಂಕಿನಂದಿಸಲು ಯತ್ನಿಸುತ್ತಿದ್ದಾರೆ. ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ,ಕಂಬಳ ಓಟಗಾರ ರಿತೇಶ್ ಹಾಗೂ ಒಂಟಿಕಟ್ಟೆಯ ಯುವಕರು ಬೆಂಕಿ ನಂದಿಸಲು ಮತ್ತು ನೀರಿನ ವ್ಯವಸ್ಥೆಗೆ ಸಹಕರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು