News Karnataka Kannada
Friday, May 03 2024
ಮಂಗಳೂರು

ಮೂಡುಬಿದಿರೆ: “ನಮ್ಮ ಜವನೆರ್ ಇರುವೈಲು” ಇದರ 8ನೇ ವಾರ್ಷಿಕೋತ್ಸವ

Moodbidri: The 8th anniversary of "Namma Jawaner Iruvailu"
Photo Credit : News Kannada

ಮೂಡುಬಿದಿರೆ: ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಮಹೋತ್ಸವ ಹಾಗೂ ರಥೋತ್ಸವ ಸಂದರ್ಭದಲ್ಲಿ ನಮ್ಮ ಜವನೆರ್ ಇರುವೈಲು ಇದರ 8ನೇ ವಾರ್ಷಿಕೋತ್ಸವವು ನಡೆಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಮ್ಮ ಜವನೆರ್ ಕಾರ್ಯವೈಖರಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಐ.ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವ್ಯವಸ್ಥಾಪನಾ ಸಮಿತಿಯ ಹಾಲಿ ಅಧ್ಯಕ್ಷ ಪೂವಪ್ಪ ಸಾಲ್ಯಾನ್, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಅಧ್ಯಕ್ಷ ಬಾಲಚಂದ್ರ ಶೆಟ್ಟಿ, ನಮ್ಮ ಜವನೆರ್ ಸಂಘದ ಅಧ್ಯಕ್ಷ ಸುನೀಲ್ ಬಾರ್ದಿಲ ಈ ಸಂದರ್ಭದಲ್ಲಿದ್ದರು.

ನಮ್ಮ ಜವನೆರ್ ತಂಡದ ಪವನ್ ಶೆಟ್ಟಿ ಸ್ವಾಗತಿಸಿದರು. ಪ್ರೇಮಾನಂದ ಇರುವೈಲು ಕಾರ್ಯಕ್ರಮ ನಿರೂಪಿಸಿದರು. ಪ್ರಶಾಂತ್ ಆಚಾರ್ಯ ಧನ್ಯವಾದಗೈದರು.

ಬಳಿಕ ನಮ್ಮ ಜವನೆರ್ ಇರುವೈಲು ಪ್ರಾಯೋಜಕತ್ವದಲ್ಲಿ ಸ್ಥಳೀಯ ನೃತ್ಯ ಪ್ರತಿಭೆಗಳಿಂದ ಸಾಂಸ್ಕೃತಿಕ ವೈಭವ ಹಾಗೂ ಮಂಗಳೂರಿನ ಶ್ರೀ ಲಲಿತೆ ಕಲಾವಿದರಿಂದ ಗರುಡ ಪಂಚಮಿ ತುಳು ಪೌರಾಣಿಕ ನಾಟಕ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು