ಮಂಗಳೂರು: ಮೂಡುಶೆಡ್ಡೆ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ದ.ಕ ಜಿಲ್ಲಾ ಸ್ವೀಪ್ ವತಿಯಿಂದ ಜಾಗೃತಿ ಜಾಥಾ ನಡೆಯಿತು.
ಈ ಸಂದರ್ಭದಲ್ಲಿ ಮತದಾರರ ಅರಿವು ಮೂಡಿಸುವ ಜಾಗೃತಿ ಯಕ್ಷಗಾನ ಪ್ರದರ್ಶಿಸಲಾಯಿತು. ಬಳಿಕ ಮೂಡುಶೆಡ್ಡೆ ವ್ಯಾಪ್ತಿಯ ವಾಣಿಜ್ಯ ಕೇಂದ್ರಗಳಿಗೆ ಕರಪತ್ರಗಳನ್ನು ಹಂಚಲಾಯಿತು.
ಈ ವ್ಯಾಪ್ತಿಯ ಬಿ.ಎಲ್.ಓ ಗಳು, ಮೂಡುಶೆಡ್ಡೆ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಸೇರಿದಂತೆ ಜಿಲ್ಲಾ ಪಂಚಾಯತ್ ಸ್ವೀಪ್ ಅಧಿಕಾರಿಗಳು ಉಪಸ್ಥಿತರಿದ್ದರು.
ಮತದಾರರ ಅರಿವು ಮೂಡಿಸುವ ಜಾಗೃತಿ ಯಕ್ಷಗಾನವನ್ನು ನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಪ್ರದರ್ಶಿಸಲಾಯಿತು. ಡಿಪೋ ಅಧಿಕಾರಿಗಳು, ಸ್ವೀಪ್ ಅಧಿಕಾರಿಗಳು ಉಪಸ್ಥಿತರಿದ್ದರು.