News Karnataka Kannada
Thursday, May 09 2024
ಮಂಗಳೂರು

ಬಂಟ್ವಾಳ ಕ್ಷೇತ್ರದ 39 ಗ್ರಾ.ಪಂ.ಗಳಿಗೆ 2000 ಕ್ಕೂ ಅಧಿಕ ಮನೆಮಂಜೂರಾಗಿದೆ- ರಾಜೇಶ್ ನಾಯ್ಕ್

More than 2000 houses have been allotted to 39 GPs in Bantwal constituency: Rajesh Naik
Photo Credit : By Author

ಬಂಟ್ವಾಳ: 2025 ರೊಳಗೆ ಎಲ್ಲಾ ವಸತಿ ರಹಿತರಿಗೆ ಮನೆ ಒದಗಿಸುವ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಹೆಚ್ಚಿನ ಅನುದಾನ ಒದಗಿಸುವ ಕೆಲಸ ಮಾಡುತ್ತಿದ್ದು, ಬಂಟ್ವಾಳ ಕ್ಷೇತ್ರದ 39 ಗ್ರಾ.ಪಂ.ಗಳಿಗೆ 2000 ಕ್ಕೂ ಅಧಿಕ ಮನೆಮಂಜೂರಾಗಿದ್ದು, ಪುರಸಭಾ ವ್ಯಾಪ್ತಿಯಲ್ಲಿ ಪ್ರಸ್ತುತ 65 ಮಂದಿಗೆ ಮನೆ ಮಂಜೂರಾತಿ ಪತ್ರ ನೀಡುತ್ತಿದ್ದೇವೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.

ಅಂಬೇಡ್ಕರ್ ನಗರ ವಸತಿ ಯೋಜನೆ, ವಾಜಪೇಯಿ ನಗರ ವಸತಿ ಯೋಜನೆಯಡಿಲ್ಲಿ ಮನೆ ಮಂಜೂರಾದ ಫಲಾನುಭವಿಗಳಿಗೆ ಶಾಸಕರ ಕಚೇರಿಯಲ್ಲಿ ಕಾಮಗಾರಿ ಅದೇಶ ಪತ್ರವನ್ನು ನೀಡಿ ಮಾತನಾಡಿದರು. ಪುರಸಭಾ ವ್ಯಾಪ್ತಿಯಲ್ಲಿ ಈವರೆಗೆ ಅರ್ಜಿ ನೀಡಿದ ಒಟ್ಟು 65 ಮಂದಿಗೆ ಫಲಾನುಭವಿಗಳಿಗೆ ಹಕ್ಕು ನೀಡಲಾಗಿದ್ದು, ಇನ್ನು ನಿವೇಶನ ರಹಿತರು ಶೀಘ್ರವಾಗಿ ಪುರಸಭೆಗೆ ಅರ್ಜಿ ನೀಡಿದರೆ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡಲಾಗುವುದು ಎಂದು ಅವರು ಹೇಳಿದರು.

ಮುಖ್ಯಾಧಿಕಾರಿ ಸ್ವಾಮಿ ಆರ್, ಪುರಸಭಾ ಸದಸ್ಯ ರಾದ ವಿದ್ಯಾವತಿ ಪ್ರಮೋದ್ ಕುಮಾರ್, ಮೀನಾಕ್ಷಿ ಗೌಡ, ಶಶಿಕಲಾ, ದೇವಕಿ, ಹರಿಪ್ರಸಾದ್, ನಾಮನಿರ್ದೇಶನ ಸದಸ್ಯ ಚಂದ್ರಶೇಖರ ದರ್ಬೆ, ಪುರಸಭಾ ಇಂಜಿನಿಯರ್ ಡೋಮೆನಿಕ್ ಡಿ.ಮೆಲ್ಲೊ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು