ಮಂಗಳೂರು: ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಸಂಸದ ನಳಿನ್ ಕುಮಾರ್ ಕಟೀಲ್ ಪರಿಶೀಲನೆ ನಡೆಸಿದರು. ಪಂಪ್ ವೆಲ್, ಜೆಪ್ಪು, ರೈಲ್ವೇ ಬ್ರಿಡ್ಜ್ ಕಾಮಗಾರಿ, ಪಂಪ್ ವೆಲ್ ರಸ್ತೆ ಅಗಲೀಕರಣ ಮತ್ತು ಚರಂಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ಈ ವೇಳೆ ಹೊಸದಾಗಿ ನಿರ್ಮಿಸಿದ ರಸ್ತೆಗಳನ್ನು ಅಗೆದು ಹಾಕುವ ಸಂಸ್ಥೆಗಳ ವಿರುದ್ದ ನಳಿನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ ಈ ಬಗ್ಗೆ ಮಾಹಿತಿ ಒದಗಿಸುವಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಸ್ತೆ ತುಂಡರಿಸಿ ಸ್ಮಾರ್ಟ್ ಸಿಟಿ ಕಾಮಗಾರಿಗೆ ತಡೆಯಾಗುತ್ತಿದ್ದು ಈ ಬಗ್ಗೆ ಚರ್ಚಿಸಲೆಂದೇ ಮುಂದಿನ ಮಂಗಳವಾರ ಸಭೆ ನಡೆಸಲಾಗುವುದು ಎಂದರು.
ಗೇಲ್ ಪೈಪ್ ಲೈನ್, ಜಲಮಂಡಳಿ, ಬಿಎಸ್ಸೆಎನ್ನೆಲ್ ಸೇರಿ ಹಲವು ಇಲಾಖೆಗಳ ಕಾಮಗಾರಿಗಳಲ್ಲಿ ಸಮಸ್ಯೆಗಳಿದ್ದು, ಈ ಕುರಿತು ಸಭೆಯಲ್ಲಿ ಚರ್ಚೆ ನಡೆಸುವುದಾಗಿ ಹೇಳಿದರು. ಜೆಪ್ಪು ರೈಲ್ವೇ ರಸ್ತೆ ವಿಳಂಬವಾಗಿರುವ ಬಗ್ಗೆ ಸ್ಮಾರ್ಟ್ ಸಿಟಿ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು. ತಕ್ಷಣ ಕಾಮಗಾರಿ ಮುಗಿಸಿ, ಇಲ್ಲವಾದರೆ ಉದ್ಘಾಟನೆ ಮಾಡುತ್ತೇನೆ ಎಂದು ಎಚ್ಚರಿಸಿದರು.
ಅಲ್ಲದೆ ಅಂತಿಮ ಗಡುವು ಕೊಟ್ಟು ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು. ಕಾಮಗಾರಿ ಪ್ರಗತಿ ಕುರಿತು ಮುಂದಿನ ಮಂಗಳವಾರ ಮಾಹಿತಿ ಸಹಿತ ಸಭೆಗೆ ಹಾಜರಾಗಬೇಕು ಎಂದು ತಿಳಿಸಿದರು. ಪರಿಶೀಲನೆ ವೇಳೆ ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಸಹಿತ ಅಧಿಕಾರಿಗಳು ಭಾಗಿಯಾಗಿದ್ದರು.
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…