ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗವು ಡಿಸೆಂಬರ್ 15 ಮತ್ತು 16 ರಂದು ವಿಶ್ವವಿದ್ಯಾನಿಲಯದಲ್ಲಿ ಪ್ರಾಣಿ ವೈವಿಧ್ಯತೆ ಮತ್ತು ಸಂರಕ್ಷಣೆ ಕುರಿತು ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಆಯೋಜಿಸಲಿದೆ. ಈ ಕಾರ್ಯಾಗಾರವು ಪದವಿ ಮತ್ತು ಸ್ನಾತಕೋತ್ತರ ಪದವಿ ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಜೀವವೈವಿಧ್ಯ ಮತ್ತು ಸಂರಕ್ಷಣೆ ತಂತ್ರಗಳ ಕುರಿತ ಇತ್ತೀಚಿನ ಬೆಳವಣಿಗೆಗಳ ಕುರಿತು ತರಬೇತಿ ನೀಡುವ ಗುರಿಯನ್ನು ಹೊಂದಿದೆ.
ಮಂಗಳಗಂಗೋತ್ರಿಯ ಮಂಗಳಾ ಕ್ರೀಡಾಂಗಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಶ್ರೀನಿವಾಸುಲು ಐಎಫ್ಎಸ್ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಎನರ್ಜಿ ವೆಟ್ ಲ್ಯಾಂಡ್ಸ್ ಕನ್ಸರ್ವೇಶನ್ ಗ್ರೂಪ್, ಸೆಂಟರ್ ಫಾರ್ ಎಕಾಲಾಜಿಕಲ್ ಸೈನ್ಸಸ್, ಮಂಗಳೂರು ಇದರ ಸಂಯೋಜಕ ಡಾ.ಟಿ.ವಿ.ರಾಮಚಂದ್ರ ಗೌರವ ಅತಿಥಿಯಾಗಿರಲಿದ್ದಾರೆ.
ವಿವಿಧ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳ ಸಂಪನ್ಮೂಲ ವ್ಯಕ್ತಿಗಳು ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರಿಸರ ವ್ಯವಸ್ಥೆಯ ಮರುಸ್ಥಾಪನೆಗಾಗಿ ಪ್ರಮುಖ ಜೀವವೈವಿಧ್ಯಗಳು ಎಂಬ ವಿಷಯದ ಕುರಿತು ಪೋಸ್ಟರ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಭಾಗವಹಿಸುವ ಎಲ್ಲಾ ಪ್ರತಿನಿಧಿಗಳಿಗೆ ಪ್ರಮಾಣಪತ್ರ ಒದಗಿಸಲಾಗುವುದು, ಯಾವುದೇ ನೋಂದಣಿ ಶುಲ್ಕವಿಲ್ಲ, ಎಂದು ಕಾರ್ಯಕ್ರಮದ ಸಂಚಾಲಕ, ಸಹಾಯಕ ಪ್ರಾಧ್ಯಾಪಕ ಡಾ.ನರಸಿಂಹಯ್ಯ ಎನ್ ಮತ್ತು ವಿಭಾಗದ ಮುಖ್ಯಸ್ಥ ಪ್ರೊ.ಎಂ.ಎಸ್.ಮುಸ್ತಾಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 6364400105
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…
ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.
ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.