Categories: ಮಂಗಳೂರು

ಮುಲ್ಕಿ: ನಂದಿನಿ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ

ಮುಲ್ಕಿ: ಹಳೆಯಂಗಡಿ ಸಮೀಪದ ಚೇಳಾಯರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಖಂಡಿಗೆ ನಂದಿನಿ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ ಸೋಮವಾರ ಮೇಷ ಸಂಕ್ರಮಣದ ದಿನದಂದು ನಡೆಯಿತು.

ಅಪಾರ ಸಂಖ್ಯೆಯಲ್ಲಿ ಭಕ್ತರು ಮೀನು ಹಿಡಿಯುವ ಜಾತ್ರೆಯಲ್ಲಿ ಪಾಲ್ಗೊಂಡರು.

ಬೆಳಿಗ್ಗೆ 6.30ರ ಸುಮಾರಿಗೆ ದೈವಸ್ಥಾನದ ಅರ್ಚಕ ಆದಿತ್ಯ ಮುಕ್ಕಾಲ್ದಿ ವಾದ್ಯಘೋಷಗಳೊಂದಿಗೆ ನಂದಿನಿ ನದಿಯ ದಡಕ್ಕೆ ಆಗಮಿಸಿ ಪ್ರಸಾದ ಹಾಕುವ ಮೂಲಕ ಮೀನು ಹಿಡಿಯಲು ಚಾಲನೆ ನೀಡಿದರು. ದಡದಲ್ಲಿ ಕಾದು ಕುಳಿತಿದ್ದ ನದಿಗೆ ಪ್ರಸಾದ ಹಾಕಿ, ಸುಡುಮದ್ದು ಸಿಡಿದ ತಕ್ಷಣ ನದಿಗೆ ಧುಮುಕಿ ಮೀನು ಹಿಡಿಯುವುದರಲ್ಲಿ ತಲ್ಲೀನರಾದರು.

ಕೆಲವರು ಇಲ್ಲಿ ಹಿಡಿದ ಮೀನನ್ನು ಇಲ್ಲೇ ಮಾರುತ್ತಾರೆ. ಇಲ್ಲಿನ ಮೀನು ಖರೀದಿಸಲು ತಂಡೋಪತಂಡವಾಗಿ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ವರ್ಷದಲ್ಲಿ ಒಂದು ದಿನ ಇಲ್ಲಿನ ಮೀನನ್ನು ಪದಾರ್ಥ ಮಾಡಿ ತಿನ್ನುವುದೇ ಇಲ್ಲಿನ ದೈವದ ಪ್ರಸಾದವೆಂದು ಇಲ್ಲಿನ ಭಕ್ತರು ನಂಬುವುದರಿಂದ ಜಾತ್ರೆಗೆ ವಿಶೇಷ ಪ್ರಾಮುಖ್ಯತೆ ದೊರೆತಿದೆ.

ಮೀನಿನ ದರವೂ ವಿಪರೀತ ಮಟ್ಟಕ್ಕೆ ಏರುತ್ತದೆ. 150 ರೂಪಾಯಿಯಿಂದ 1 ಸಾವಿರದ ವರೆಗೂ ಮೀನು ಬಿಕರಿಯಾಗುತ್ತದೆ. ಈ ಬಾರಿ ಬಿರು ಬಿಸಿಲಿನ ಪರಿಣಾಮ ನೀರಿನ ಪ್ರಮಾಣ ಕಡಿಮೆಯಾಗಿದ್ದು ಹೇರಳ ಮೀನು ದೊರೆತಿದೆ. ಇರ್ಫೆ, ಕಾನೆ, ಮಾಲಾ ಸಹಿತ ವಿವಿಧ ಬಗೆಯ ಮೀನುಗಳು ಬಲೆಗೆ ಸಿಕ್ಕಿದ್ದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಿಂದ ಮೀನು ಹಿಡಿಯಲು ಬಂದವರು ಫುಲ್ ಖುಷಿಯಾಗಿದ್ದಾರೆ

ಮಂಗಳವಾರ ಬೆಳಿಗ್ಗೆ 5ಕ್ಕೆ ಧರ್ಮರಸು ಉಳ್ಳಾಯ ಹಾಗೂ ಪರಿವಾರ ದೈವಗಳಿಗೆ ನೇಮ, ನಂದಿಗೋಣ ಕುಮಾರ ಸಿರಿಗಳ ಭೇಟಿ, ನಾಗದೇವರಿಗೆ ಭಕ್ತಾದಿಗಳಿಂದ ತಂಬಿಲ, ಸಂಜೆ 4ಕ್ಕೆ ಚೆಂಡು, 6ಕ್ಕೆ ಪರಿವಾರ ದೈವಗಳಿಗೆ ಜೋಡಿ ನೇಮೋತ್ಸವ ನಡೆಯಲಿದೆ

Ashika S

Recent Posts

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

17 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

37 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

1 hour ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

1 hour ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

2 hours ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

2 hours ago