ಮಂಗಳೂರು: ಲಯನ್ಸ್ ಕ್ಲಬ್ ಕಾವೂರು ಹಾಗೂ ಉಳಾಯಿಬೆಟ್ಟು ಶ್ರೀ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಮಂಗಳೂರು ಎ.ಜೆ. ಆಸ್ಪತ್ರೆ ರಕ್ತ ಕೇಂದ್ರ ಸಹಯೋಗದಲ್ಲಿ “ಬೃಹತ್ ರಕ್ತದಾನ ಶಿಬಿರ” ಮೇ.7ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 12 ವರೆಗೆ ಉಳಾಯಿಬೆಟ್ಟು ಶ್ರೀ ವಿಶ್ವನಾಥ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.