News Karnataka Kannada
Friday, May 03 2024
ಮಂಗಳೂರು

ಮಂಗಳೂರಿನಿಂದ ಕಾರ್ಗಿಲ್ ಗೆ ಜನ ಜಾಗೃತಿಗಾಗಿ ಬೈಕ್ ಮೂಲಕ ಹೊರಟ ಮುಸ್ಲಿಂ ದಂಪತಿ

Muslim couple
Photo Credit : News Kannada

ಮಂಗಳೂರು:  ಮಂಗಳೂರಿನಿಂದ ಜನ ಜಾಗೃತಿಗಾಗಿ ಬೈಕ್ ಮೂಲಕ  ಕಾರ್ಗಿಲ್ ಗೆ ಮುಸ್ಲಿಂ ದಂಪತಿ ಹೊರಟಿದ್ದಾರೆ.  ಈ ಅದ್ಬುತವಾದ ಪ್ರಯಾಣದ ಬಗ್ಗೆ ಅವರು ಸಂತಸ ಹಂಚಿಕೊಂಡಿದ್ದಾರೆ. ಮಂಗಳೂರಿನ ಸೈಫ್ ಸುಲ್ತಾನ್ ಮತ್ತು ಪತ್ನಿ ಅದೀಲಾ ಫರ್ಹಾನ್‌ ಜೊತೆಯಾಗಿ ಬೈಕ್‌ ಮೂಲಕ ತಮ್ಮ ಯಾತ್ರೆಯನ್ನು ಜು. 29ರಂದು ಮಂಗಳೂರಿನಿಂದ ಶುರು ಮಾಡಿ ಆ. 15ರ ಸ್ವಾತಂತ್ರ್ಯ ದಿನಾಚರಣೆಯಂದು ಕಾರ್ಗಿಲ್‌ನಲ್ಲಿ ಸಮಾಪನ ಮಾಡಲಿದ್ದಾರೆ.

ಈ ವೇಳೆ ಅವರು ದೇಶದಾದ್ಯಂತ ರಕ್ತದಾನ, ದೇಶಭಕ್ತಿ, ದೇಶಪ್ರೇಮ, ಹಿಜಾಬ್‌ ಕುರಿತ ಮಹತ್ವ ಸೇರಿದಂತೆ ಈ ಎಲ್ಲಾ ವಿಚಾರದ ಕುರಿತು ಜಾಗೃತಿ ಮೂಡಿಸಲಿದ್ದಾರೆ. ಮಂಗಳೂರಿನ ನೆಹರೂ ಮೈದಾನದಲ್ಲಿ ಜು. 29ರಂದು ಬೆಳಿಗ್ಗೆ 7.30ಕ್ಕೆ ಸ್ಪೀಕರ್‌ ಯುಟಿ ಖಾದರ್‌ ಮತ್ತು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್‌ ಜೈನ್‌ ಅವರು ಭಾರತ ದ್ವಜವನ್ನು ನೀಡುವ ಮೂಲಕ ಇವರ ಯಾತ್ರೆ ಆರಂಭಗೊಳ್ಳಲಿದೆ.

ಜು. 28ರಂದು ಇದರ ಪೂರ್ವಭಾವಿಯಾಗಿ ಉಚಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಬ್ಲಡ್‌ ಹೆಲ್ಪ್‌ಲೈನ್‌ ಕರ್ನಾಟಕ, ರೆಡ್ ಕ್ರಾಸ್‌ ಬ್ಲಡ್‌ ಬ್ಯಾಂಡ್ ಈ ಕಾರ್ಯಕ್ರಮಕ್ಕೆ ಸಹಭಾಗಿತ್ವ ನೀಡಲಿದೆ. ಈ ಪ್ರಯಾಣದ ಕುರಿತು ಮಾತನಾಡಿರುವ  ಸೈಫ್‌ ಸುಲ್ತಾನ್‌, “ಇದು ನಮಗೆ ಖುಷಿಯ ಕ್ಷಣವಾಗಿದೆ. ಇದೇ ಮೊದಲ ಬಾರಿಗೆ ನಾನು ಪತ್ನಿ ಜೊತೆ ಕರ್ನಾಟಕದಿಂದ ಕಾರ್ಗಿಲ್‌ಗೆ ಜಾಗೃತಿಗಾಗಿ ಬೈಕ್‌ನಲ್ಲಿ ಹೊರಟಿದ್ದೇವೆ. ಇಲ್ಲಿಂದ ಭಾರತದ ಧ್ವಜ ಪಡೆದು ಅದನ್ನು ಕಾರ್ಗಿಲ್‌ನಲ್ಲಿ ಕರ್ನಲ್ ಅಭಿಮನ್ಯುವಿಗೆ ಮುಟ್ಟಿಸಲಿದ್ದೇವೆ. ಅವರು ಆ. 15ರಂದು ಸ್ವಾತಂತ್ರ್ತ ದಿನಾಚರಣೆ ದಿನ ಧ್ವಜಾರೋಹಣ ಮಾಡಲಿದ್ದಾರೆ.

3800 ಕಿಲೋ ಮೀಟರ್‌ ನಮ್ಮ ಯಾತ್ರೆ ನಡೆಯಲಿದ್ದು, ಒಟ್ಟು 17 ದಿನಗಳ ಪಯಣದಲ್ಲಿ 13 ಕಡೆಗಳಲ್ಲಿ ಉಳಿದುಕೊಳ್ಳಲಿದ್ದೇವೆ. ಬಿಎಂಡಬ್ಲ್ಯೂ ಜಿಎಸ್‌ 310ನಲ್ಲಿ ನಾವು ಹೊರಡಲಿದ್ದೇವೆ” ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು