ಮಂಗಳೂರು: ರಾಜ್ಯದಲ್ಲಿ 10 ಮುಸ್ಲಿಂ ಹೆಣ್ಣು ಮಕ್ಕಳ ಕಾಲೇಜು ಸ್ಥಾಪಿಸಲು ರಾಜ್ಯ ಸರಕಾರ ಮುಂದಾಗಿರುವ ಬಗ್ಗೆ ವರದಿಯಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಯಾದಗರಿ, ರಾಯಚೂರು ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ 10 ಕಾಲೇಜುಗಳನ್ನು ಸ್ಥಾಪನೆಗೆ ಶೀಘ್ರವೇ ಕಾರ್ಯತಂತ್ರ ನಡೆಯಲಿದೆ ಎನ್ನಲಾಗಿದೆ.
ರಾಜ್ಯ ವಕ್ಫ್ ಬೋರ್ಡ್ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸುವ ಪ್ರಸ್ತಾಪ ಸಲ್ಲಿಸಿತ್ತು.ಇದಕ್ಕೆ ಸರಕಾರದ ಅನುಮೋದನೆ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಪ್ರತಿ ಕಾಲೇಜಿಗೆ 2.5 ಕೋಟಿ ರೂ.ಅನುದಾನವನ್ನೂ ಮೀಸಲಿರಿಸಲಾಗಿದೆ ಎನ್ನಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಂದಿನ ತಿಂಗಳು ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್ ಕಣ್ಣೂರಿನ 16 ಎಕರೆ ಜಾಗದಲ್ಲಿ ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆಗೆ ಜಾಗ ಗುರುತಿಸಲಾಗಿದೆ.
ಉಳಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವ ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕದ ಕೆಲವೆಡೆ ಕಾಲೇಜು ಆರಂಭಿಸಲಾಗುತ್ತದೆ.ರಾಜ್ಯಾದ್ಯಂತ ಇರುವ ವಕ್ಫ್ ಆಸ್ತಿಯಲ್ಲೇ ಈ ಕಾಲೇಜುಗಳು ನಿರ್ಮಾಣವಾಗಲಿದೆ.
ಶಂಕುಸ್ಥಾಪನೆ ನೆರವೇರಿದ ಬಳಿಕ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದ್ದು, 2024-25ನೇ ಸಾಲಿನಿಂದ ಕಾಲೇಜುಗಳು ಕಾರ್ಯಾರಂಭವಾಗುವ ನಿರೀಕ್ಷೆಯಿದೆ. ಆರಂಭದಲ್ಲಿ ಪ್ರಥಮ ಪಿಯುಸಿ ಆರಂಭವಾಗಲಿದ್ದು, ನಂತರದ ವರ್ಷ ದ್ವಿತೀಯ ಪಿಯುಸಿ ಬಳಿಕ ಪದವಿವರೆಗೂ ಮುಂದುವರಿಯಲಿದೆ.
ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…
ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…
ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…
ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.