News Karnataka Kannada
Thursday, May 09 2024
ಮಂಗಳೂರು

ಕದ್ರಿ ದೇವಸ್ಥಾನದಲ್ಲಿ ಜಾತ್ರೋತ್ಸವಕ್ಕೆ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ: ಬ್ಯಾನರ್‌ ಅಳವಡಿಕೆ

Muslim traders banned from taking part in Jatrafestival at Kadri Manjunatha temple, banners put up
Photo Credit : News Kannada

ಮಂಗಳೂರು: ನಗರದ ಕಾವೂರು ಮಹಾಲಿಂಗೇಶ್ವರ ದೇವಸ್ಥಾನ ಆಯ್ತು, ಇದೀಗ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಜಾತ್ರೋತ್ಸವಕ್ಕೆ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಿರ್ಬಂಧ ವಿಧಿಸಲಾಗಿದೆ. ದೇವಸ್ಥಾನದ ವಠಾರದಲ್ಲಿ ಹಿಂದೂ ಸಂಘಟನೆಗಳು ನಿರ್ಬಂಧದ ಬ್ಯಾನರ್‌ ಅಳವಡಿಸಿವೆ.

ಕುಕ್ಕರ್‌ ಬಾಂಬ್‌ ಸ್ಫೋಟದ ಬಗ್ಗೆ ಉಲ್ಲೇಖಿಸಿ ವಿಹಿಂಪ ಮತ್ತು ಬಜರಂಗದಳ ಬ್ಯಾನರ್‌ ಅಳವಡಿಸಿದೆ. ಕದ್ರಿ ವಿಶ್ವ ಹಿಂದೂ ಪರಿಷತ್‌ ಘಟಕದಿಂದ ದೇವಸ್ಥಾನದ ಪ್ರವೇಶದಲ್ಲೇ ಬ್ಯಾನರ್‌ ಅಳವಡಿಸಲಾಗಿದ್ದು, ಜ.15ರಿಂದ ಜ.25ರ ವರೆಗೆ ಕದ್ರಿ ಜಾತ್ರೋತ್ಸವ ನಡೆಯುತ್ತಿದೆ. ಈಗಾಗಲೇ ದೇವಸ್ಥಾನದ ರಸ್ತೆಯುದ್ದಕ್ಕೂ ಸ್ಟಾಲ್‌ಗಳನ್ನು ಅಳವಡಿಸಲಾಗಿದೆ.ವ್ಯಾಪಾರಕ್ಕೆ ಬಂದವರನ್ನು ವಾಪಸ್ ಕಳಿಸಲಾಗಿದೆ

ಕದ್ರಿ ಶ್ರೀಮಂಜುನಾಥ ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿದೆ. ಈ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ಹಲವು ವರ್ಷಗಳಿಂದ ವ್ಯಾಪಾರ ನಡೆಸುತ್ತಿದ್ದಾರೆ. ಅದರಂತೆ ಈ ಬಾರಿಯೂ ಮುಸ್ಲಿಂ ವ್ಯಾಪಾರಿಗಳು ಜಾತ್ರೆಯಲ್ಲಿ ವ್ಯಾಪಾರಕ್ಕೆ ಆಗಮಿಸಿದ್ದರು. ಆಗ ಅನ್ಯಧರ್ಮೀಯರನ್ನು ಬಜರಂಗದಳ ಕಾರ್ಯಕರ್ತರು ವಾಪಸ್‌ ಕಳುಹಿಸಿದ್ದಾರೆ.

ಕಳೆದ ವರ್ಷ ಅವಿಭಜಿತ ದಕ್ಷಿಣ ಕನ್ನಡ ಕನ್ನಡ ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದ ನಿಷೇಧದ ಬ್ಯಾನರ್ ಈ ವರ್ಷವೂ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಪ್ಪನಾಡು, ಉಡುಪಿ ಜಿಲ್ಲೆಯ ಕಾಪು, ಪೆರ್ಡೂರು ದೇವಸ್ಥಾನಗಳಲ್ಲಿ ಈ ರೀತಿಯ ಬ್ಯಾನರ್ ಗಳು ಕಾಣಿಸಿಕೊಂಡದ್ದು ವಿವಾದಕ್ಕೆ ಕಾರಣವಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು