ಮೈರೋಳ್ತಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ವತಿಯಿಂದ ಬಂದಾರು ಗ್ರಾಮದ ಮೈರೋಳ್ತಡ್ಕ ಒಕ್ಕೂಟದಲ್ಲಿ ಆರಂಭಗೊಂಡ ಶಾಂಭವಿ ಜ್ಞಾನ ವಿಕಾಸ ಕೇಂದ್ರವು ಹೇಮಾವತಿ ವಿ ಹೆಗ್ಗಡೆ ಮಾರ್ಗದರ್ಶನದಲ್ಲಿ ಕಳೆದ 23ವರ್ಷಗಳಿಂದ ನಡೆದು ಬಂದಿದ್ದು, ಕೇಂದ್ರದ ಸದಸ್ಯರು ಮಹಿಳಾ ಸಬಲೀಕರಣ, ಕೌಟುಂಬಿಕ ಸಾಮರಸ್ಯ, ವೈಯುಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ, ಆರ್ಥಿಕ ಸಬಲೀಕರಣ, ಕೌಶಲ್ಯ ಅಭಿವೃದ್ಧಿ ಮುಂತಾದ ಹಲವು ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅಭಿವೃದ್ಧಿ ಹೊಂದಿರುತ್ತಾರೆ.
ಈ ನಿಟ್ಟಿನಲ್ಲಿ ಧರ್ಮಸ್ಥಳ ದ ವತಿಯಿಂದ ಈ ಕೇಂದ್ರಗಳಿಗೆ ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರ ಎಂದು ಗುರುತಿಸಿ ಅಭಿನಂದನಾ ಪ್ರಮಾಣ ಪತ್ರವನ್ನು ನೀಡಲಾಯಿತು. ಸೇವಾಪ್ರತಿನಿಧಿ ಚಂದ್ರಕಲಾ ಕಾರ್ಯಕ್ರಮ ನಿರೂಪಿಸಿದರು. ಸಂಯೋಜಕಿ ಹರಿಣಾಕ್ಷಿ ಸ್ವಾಗತಿಸಿ, ಗಿರಿಜಾ ಧನ್ಯವಾದವಿತ್ತರು.