ಮಂಗಳೂರು: ಕಾಂಗ್ರೆಸ್ ಘೋಷಿಸಿರುವ ನಾಲ್ಕು ಗ್ಯಾರಂಟಿಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ಮೊದಲು ಕಾಂಗ್ರೆಸ್ ಘೋಷಣೆ ಮಾಡಿದ ಗ್ಯಾರಂಟಿಗೆ ಮಾನದಂಡ ಇರಲಿಲ್ಲ. ಇವತ್ತು ಘೋಷಿಸಿದ ನಾಲ್ಕು ಗ್ಯಾರಂಟಿಗಳಿಗೆ ಮಾನದಂಡ ಹಾಕಿದ್ದಾರೆ. ಗೃಹ ಜ್ಯೋತಿ ಹೆಸರಲ್ಲಿ ಇಡೀ ರಾಜ್ಯವನ್ನು ಕತ್ತಲಿನಲ್ಲಿ ಇಡಲಾಗಿದೆ.
ಝೀರೋ ಬಿಲ್ ಜೊತೆಗೆ ಈಗ ಝೀರೋ ಕರೆಂಟ್ ಆಗಿದೆ. ಇಲ್ಲದಿರೋ ಮಾನದಂಡಗಳನ್ನು ತಂದು ಜನರಿಗೆ ಸಮಸ್ಯೆ ಆಗ್ತಿದೆ. ಇಂದಿರಾಗಾಂಧಿಯವರ ಗತವೈಭವದಲ್ಲಿ ಎಮರ್ಜೆನ್ಸಿ ತರಲಾಗಿತ್ತು. ಈಗ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ, ಸಾಮಾಜಿಕ ತಾಣದವರ ಮೇಲೂ ಕೇಸು ಹಾಕಲಾಗ್ತಿದೆ.
ಭ್ರಷ್ಟಾಚಾರ ಆರೋಪ ಮಾಡಿದ ಅಧಿಕಾರಿಗಳ ಮೇಲೂ ಕೇಸು ಹಾಕಿ ಎಮರ್ಜೆನ್ಸಿ ತಂದಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರೋದ್ರಿಂದ ರೈತರಿಗೆ ಸಮಸ್ಯೆ ಆಗಲಿದೆ. ಕರ್ನಾಟಕ ರೈತರ ಇಚ್ಛೆ ಪೂರೈಸದೇ, ಅವರಿಗೆ ನ್ಯಾಯ ಕೊಡದೇ. ಇಲ್ಲಿನ ರೈತರಿಗೆ ನೀರು ಕೊಡದೇ ರಾತ್ರಿ ತಮಿಳುನಾಡಿಗೆ ನೀರು ಬಿಡಲಾಗ್ತಿದೆ.
ಇದು ರಾಜ್ಯದ ರೈತರಿಗೆ ಮಾಡಿರೋ ದೊಡ್ಡ ಅನ್ಯಾಯ. ಇಡೀ ರಾಜ್ಯದಲ್ಲಿ ನೀರಿನ ಸಮಸ್ಯೆ ಇದೆ, ಬರದ ಸ್ಥಿತಿ ಇದೆ. ಇದರ ಮಧ್ಯೆ ಪಂಪ್ ಗಳಿಗೆ ಕರೆಂಟ್ ಇಲ್ಲ, ಜನ ತತ್ತರಿಸಿ ಹೋಗಿದ್ದಾರೆ. ಇದರ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದರು.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್ಗೆ ಪ್ರವೇಶಿಸಿದೆ. ಇನ್ನು ಆರ್ಸಿಬಿ…
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.
ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್ ಫಾರ್ ಫ್ರಾಡ್…