News Karnataka Kannada
Monday, April 29 2024
ಮಂಗಳೂರು

ಪಕ್ಷದ ರಾಷ್ಟ್ರೀಯ ನಾಯಕರ ನಿರ್ಧಾರಕ್ಕೆ ನಾವು ಬದ್ದ : ಸಂಸದ ನಳಿನ್‌ ಕುಮಾರ್‌

ಸಂಸದ ನಳಿನ್ ಕುಮಾರ್ ಕಟೀಲ್ ಗೆ ಬಿಜೆಪಿ ಟಿಕೆಟ್ ಕೈ ತಪ್ಪೋ ಸಾಧ್ಯತೆ ವಿಚಾರವಾಗಿ ಮಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾನ್ಯ ಕಾರ್ಯಕರ್ತರನ್ನ ಗುರುತಿಸೋದು ನಮ್ಮ ಪಾರ್ಟಿಯ ವಿಶೇಷತೆ ಹಾಗೂ ಪಕ್ಷದ ರಾಷ್ಟ್ರೀಯ ನಾಯಕರು ಯೋಚನೆ ಮಾಡಿಕೊಂಡು ಆಯ್ಕೆ ಮಾಡ್ತಾರೆ.
Photo Credit : News Kannada

 ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಬಿಜೆಪಿ ಟಿಕೆಟ್ ಕೈ ತಪ್ಪೋ ಸಾಧ್ಯತೆ ವಿಚಾರವಾಗಿ ಮಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾನ್ಯ ಕಾರ್ಯಕರ್ತರನ್ನ ಗುರುತಿಸೋದು ನಮ್ಮ ಪಾರ್ಟಿಯ ವಿಶೇಷತೆ ಹಾಗೂ ಪಕ್ಷದ ರಾಷ್ಟ್ರೀಯ ನಾಯಕರು ಯೋಚನೆ ಮಾಡಿಕೊಂಡು ಆಯ್ಕೆ ಮಾಡ್ತಾರೆ.

ಪಕ್ಷ ನಿಂತ ನೀರಾಗಬಾರದು, ಹೊಸಬರು ಬರ್ತಾ ಇರಬೇಕು, ಸ್ವಾಗತಿಸ್ತೇನೆ, ಪಕ್ಷದ ರಾಷ್ಟ್ರೀಯ ನಾಯಕರ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ.ಯಾರೇ ಆದರೂ ಮೋದಿ ಪ್ರಧಾನಿಯಾಗಬೇಕು, ಬಿಜೆಪಿ ಮತ್ತೆ ಗೆಲ್ಲಬೇಕು ಎಂದರು

ರಾಷ್ಟ್ರೀಯ ನಾಯಕರ ಯೋಚನೆಗೆ ನಾವು ಬದ್ದರಾಗಿ ಕೆಲಸ ಮಾಡ್ತೇವೆ. ಪಾರ್ಟಿ ಏನು ಹೇಳುತ್ತೋ ಅದನ್ನ ನಾವು ಮಾಡ್ತೇವೆ,ಗುಡಿಸಿ ಅಂದ್ರೆ ಗುಡಿಸ್ತೇವೆ, ಒರೆಸಿ ಅಂದ್ರೆ ಒರೆಸ್ತೇವೆಅಧಿಕಾರ ಪ್ರಮುಖ ಅಲ್ಲ, ರಾಷ್ಟ್ರೀಯ ನಾಯಕರ ಚಿಂತನೆ ಮುಖ್ಯ ಎಂದು ಮನದ ಮಾತನ್ನು ಮುಂದಿಟ್ಟರು. ನಾನು ಸಾಮಾಜಿಕ ತಾಣಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ, ಪಕ್ಷದ ನಿರ್ಧಾರಕ್ಕೆ ಬದ್ದರಾಗಿರುತ್ತೇವೆ. ನಾವು ಅದನ್ನೇ ನಂಬಿ ಇದ್ದವರಲ್ಲ, ಸಂಘಟನೆ ಕಾರ್ಯವನ್ನು ನಂಬಿದವರು. ಕಾರ್ಯಕರ್ತರ ಆಧಾರದಲ್ಲಿ ಇದೆಲ್ಲಾ ಕಾರ್ಯಗಳು ಆಗುತ್ತೆ ರಾಷ್ಟ್ರೀಯ ನಾಯಕರ ಯಾವ ತೀರ್ಮಾನಕ್ಕೂ ನಾವು ಬದ್ದ ಎಂದರು.

ನನಗೆ ಮೂರು ಬಾರಿ ಅವಕಾಶ ಕೊಡಲಾಗಿದೆ, 15 ವರ್ಷ ಕೆಲಸ ಮಾಡಿದ್ದೇನೆ. ಎಲ್ಲೂ ವ್ಯತ್ಯಾಸಗಳಿಲ್ಲ, ನಮ್ಮ ಪಕ್ಷದಲ್ಲಿ ತುಳಿಯೋ ಕೆಲಸ ನಡೆಯಲ್ಲ, ಬೆಳೆಸೋ ಕೆಲಸ ಮಾಡ್ತಾರೆ ನಾನು ಸಾಮಾನ್ಯ ಕಾರ್ಯಕರ್ತನಾಗಿದ್ದೆ, ಸಂಘದ ವಿಚಾರ ಇಟ್ಟುಕೊಂಡಿದ್ದೆ ಬಿಜೆಪಿ ಕೆಲಸ ಮಾಡು ಅಂತ ಹೇಳಿದ್ರು, ಲೋಕಸಭೆಗೆ ನಿಂತೆ ಸಾಮಾನ್ಯ ಕಾರ್ಯಕರ್ತನಿಗೆ ರಾಜ್ಯಾಧ್ಯಕ್ಷ ಸ್ಥಾನ ಕೂಡ ಕೊಟ್ಟರು.

ಅವಕಾಶ ಸಿಕ್ಕಾಗ ನ್ಯಾಯ ಸಿಕ್ಕಿದೆ, ಸಿಗದೇ ಇದ್ದಾಗ ಅನ್ಯಾಯ ಆಗಿದೆ ಅನ್ನೋ ಹಕ್ಕು ನನಗಿಲ್ಲ ಪಕ್ಷ ಎಲ್ಲರನ್ನೂ ಬೆಳೆಸಿದೆ, ಪಕ್ಷದ ಕೆಲಸಕ್ಕೆ ಜನ ಬೇಕಿದೆ ಅಸಮಾಧಾನ ಯಾಕೆ? ನಾವು ಮಾಡೋದು ಸಂಘಟನೆ ಕಾರ್ಯ ಅಸಮಾಧಾನ ಯಾವುದೇ ಸಂಧರ್ಭದಲ್ಲಿ ಇರಲ್ಲ, ಅದು ಅಸಾಧ್ಯ ಎಂದು ಪ್ರತಿಕ್ರಿಯೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು