Categories: ಮಂಗಳೂರು

ರಕ್ತದಾನ ಮಾಡಿ ಮಾದರಿಯಾದ ನೂತನ ಕಮೀಷನರ್ ಅನುಪಮ್ ಅಗರ್ವಾಲ್

ಮಂಗಳೂರು: ಭಾರತದ ಪುರಾಣ ಅಧ್ಯಯನ‌ ಮಾಡಿದಾಗಲೂ ದಾನಶೂರ ಕರ್ಣ ದಾನದಿಂದಲೇ ಪ್ರಸಿದ್ಧನಾಗಿದ್ದ ಎಂಬುದು ಸಾಬೀತಾಗಿದ್ದು ನಾವು ಬೇರೆಯವರಿಂದ ದಾನ ಕೇಳೋದಿಕ್ಕಿಂತ ಮುಂಚೆ ನಾವು ದಾನ ಮಾಡಿ ತೋರಿಸಬೇಕು ಎಂಬ ನಿಟ್ಟಿನಲ್ಲಿ ಪೊಲೀಸರು ಸ್ವತಃ ರಕ್ತದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದರು.

ಮಂಗಳೂರು ನಗರ ಪೊಲೀಸ್ ಕೇಂದ್ರ ಉಪ ವಿಭಾಗ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ವೆನ್ ಲಾಕ್ ಆಸ್ಪತ್ರೆಯ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಬ್ಲಡ್ ಡೋನರ್ಸ್ ಸೇವೆ ನಿಜಕ್ಕೂ ಶ್ಲಾಘನೀಯವಾಗಿದ್ದು ಇಂದಿನ ಸ್ವಯಂಪ್ರೇರಿತ ರಕ್ತದಾನ‌ ಶಿಬಿರದಲ್ಲಿ ನಾನು ರಕ್ತದಾನ ಮಾಡುವುದಾಗಿ ಘೋಷಿಸಿ ರಕ್ತದಾನ ಮಾಡಿದರು.

ಎಸಿಪಿ ಮಹೇಶ್ ಕುಮಾರ್ ಮಾತನಾಡಿ ರಕ್ತದಾನ ಪುಣ್ಯದ ಕೆಲಸವಾಗಿದ್ದು ಪೊಲೀಸರು ಯಾರಿಗಾದರೂ ರಕ್ತದ ಅವಶ್ಯಕತೆ ಇದ್ದಾಗ ಶಿಬಿರಕ್ಕೆ ಕಾಯದೆ ತಕ್ಷಣ ಆಸ್ಪತ್ರೆಗೆ ಧಾವಿಸಿ ರಕ್ತದಾನ ಮಾಡಿ ಮಾನವೀಯತೆ ಮೆರೆಯಬೇಕು ಎಂದರು.

ಡಾ. ಅಣ್ಣಯ್ಯ ಕುಲಾಲ್ ಅಂಗಾಂಗ ದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಡಿಸಿಪಿ ಬಿ.ಪಿ. ದಿನೇಶ್ ಕುಮಾರ್, ಬ್ಲಡ್ ಡೋನರ್ಸ್ ಮಂಗಳೂರು ಅಧ್ಯಕ್ಷ ನವಾಝ್ ನರಿಂಗಾನ, ಸ್ಥಾಪಕಾಧ್ಯಕ್ಷ ಸಿದ್ದಿಕ್ ಮಂಜೇಶ್ವರ, ಕದ್ರಿ ಪೊಲೀಸ್ ಠಾಣೆಯ ಸೋಮಶೇಖರ್, ಉರ್ವ ಠಾಣೆಯ ಭಾರತಿ, ಬರ್ಕೆ ಠಾಣೆಯ ನಾಗೇಶ್, ಬಂದರು‌ ಠಾಣೆಯ ರಾಘವೇಂದ್ರ ಬೈಂದೂರು ಹಾಗೂ ವೆನ್ ಲಾಕ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ಸದಾಶಿವ ಉಪಸ್ಥಿತರಿದ್ದರು.

Sneha Gowda

Recent Posts

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಗಾಡ್ ಪ್ರಾಮಿಸ್’ ಚಿತ್ರದ ಮುಹೂರ್ತ

ಕಾಂತಾರ ಚಿತ್ರದಲ್ಲಿ ಸಣ್ಣ ಪಾತ್ರ ಮಾಡುವ ಮೂಲಕ ಗಮನ ಸೆಳೆದಿದ್ದ ಯುವ ನಟ ಸೂಚನ್ ಶೆಟ್ಟಿ ಅವರು ಹೊಸ ಸಾಹಸಕ್ಕೆ…

2 mins ago

ತೇರಿನ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ.

14 mins ago

ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಆಚರಣೆ

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ತಹಸೀಲ್ದಾ‌ರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರು…

32 mins ago

ಶ್ರೀನಿವಾಸ್ ಪ್ರಸಾದ್ ಗೆ ನುಡಿ ನಮನ ಸಲ್ಲಿಸಿ ಕಣ್ಣೀರಿಟ್ಟ ಬದನವಾಳು ಗ್ರಾಮಸ್ಥರು

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…

44 mins ago

ಮೈಸೂರಿನ ಸ್ಪಂದನ ಸೇವಾ ಸಂಸ್ಥೆಯಿಂದ ʼಅಕ್ಷಯ ಅನ್ನʼ ಕಾರ್ಯಕ್ರಮ

ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ‌…

55 mins ago

ಮರುಬಿಡುಗಡೆಗೆ ತಯಾರಾಗಿದೆ ಉಪೇಂದ್ರ ಅಭಿನಯಿಸಿ, ನಿರ್ದೇಶಿಸಿದ ‘ಎ’ ಸಿನೆಮಾ

ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…

1 hour ago