ಮಂಗಳೂರು: ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಸಿಐಎಸ್ಎಫ್ ಪಿಎಸ್ಸೈ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನವ ಮಂಗಳೂರು ಬಂದರಿನ ಮುಖ್ಯ ದ್ವಾರದ ಬಳಿ ನಡೆದಿದೆ.
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ಪಿಎಸ್ಸೈ ಝಾಕೀರ್ ಹುಸೈನ್(58) ಆತ್ಮಹತ್ಯೆ ಮಾಡಿಕೊಂಡವರು. ರಾಯಚೂರು ಮೂಲದ ಝಾಕೀರ್ ಹುಸೈನ್(58) ಎನ್ಎಂಪಿಟಿ ಮುಖ್ಯದ್ವಾರದಲ್ಲಿ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಭಾನುವಾರ ಬೆಳಗ್ಗೆ 6.30ಕ್ಕೆ ರಾತ್ರಿ ಪಾಳಿ ಕರ್ತವ್ಯ ಮುಗಿಸಿ ಶೌಚಾಲಯಕ್ಕೆ ಹೋಗಿದ್ದ ಝಾಕೀರ್ ಶೌಚಾಲಯದಲ್ಲೇ ತನ್ನ ಸರ್ವೀಸ್ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.