Categories: ಮಂಗಳೂರು

ವರದಕ್ಷಿಣೆ ಕಿರುಕುಳ ತಾಳಲಾರದೆ ನವವಿವಾಹಿತೆ ಆತ್ಮಹತ್ಯೆ

ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರದ ನಿವಾಸಿ ನೌಸೀನ್ (22) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹ ವಾಗಿದ್ದರು.

ಪ್ರೇಮವಿವಾಹ ಆದರೂ ಕೂಡ ವಿವಾಹ ಸಂದರ್ಭದಲ್ಲಿ 18 ಪವನ್ ಚಿನ್ನವನ್ನು ಉಡುಗೂರೆಯಾಗಿ ನೀಡಲಾಗಿತ್ತು. ಆದರೆ ಹುಡುಗಿ ಕಡೆಯವರು ನೀಡಿದ ವರದಕ್ಷಿಣೆ ಕಡಿಮೆಯಾಗಿದೆ, ಪ್ರೀತಿಸಿ ಮದುವೆಯಾದರಿಂದ ಒಳ್ಳೆ ಹುಡುಗಿ ಸಿಗಲಿಲ್ಲ, ಇಲ್ಲದಿದ್ದರೆ ಒಳ್ಳೆಯ ಹುಡುಗಿ ಸಿಗಬಹುದಿತ್ತು ಎಂದು ಅತ್ತೆ ಝೂಬೈದಾ, ಮಗಳು ಅಜ್ಮೀಯಾ ಮತ್ತು ಗಂಡ ಸೇರಿಕೊಂಡು ಹೀಯಾಳಿಸಿದ್ದಲ್ಲದೆ, ಮಾನಸಿಕ ಕಿರುಕುಳ ಕೊಡುತ್ತಿದ್ದರು.

ಮಾನಸಿಕವಾಗಿ ನೊಂದಿದ್ದ ತಂಗಿ ನೌಸೀನ ಆ.25 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಹೋದರ ನಾಸೀರ್‌ ಆರೋಪಿಸಿದ್ದಾರೆ.

ಈ ಸಾವಿನ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ನಾಸೀರ್ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಸಜೀಪ ಮೂಡ ನಿವಾಸಿ ಕೆ.ಎಮ್ ಬಾವ ಅವರ ಮಗಳು ನೌಸೀನ್ ಅವರು ಉಳ್ಳಾಲ ಮೂಲದ ಅಜ್ಮಾನ ಎಂಬವರಿಗೆ ಇನ್ಸ್ಟಾ ಗ್ರಾಂ ಮೂಲಕ ಪರಿಚಯವಾಗಿ ಪರಸ್ಪರ ಪ್ರೀತಿ ಉಂಟಾಗಿ ಮನೆಯವರ ಒಪ್ಪಿಗೆ ಮುಖಾಂತರ ಅ.14 ರಂದು ಮದುವೆಯಾಗಿದ್ದರು.

ಆದರೆ ಅಜ್ಮಾನ ಮದುವೆಯಾದ ಕೆಲವೇ ದಿನಗಳಲ್ಲಿ ನೌಸೀನ್ ಳ ಒಡವೆಗಳನ್ನು ಮಾರಿದ್ದಾನೆ. ಜೊತೆಗೆ ಇನ್ನಷ್ಟು ಒಡೆವೆಗಳನ್ನು ತರುವಂತೆ ಪೀಡಿಸುತ್ತಿದ್ದ. ಇದು ಅಲ್ಲದೆ,ಅತ್ತೆ ಮತ್ತು ನಾದಿನಿಯವರು ಲವ್ ಮ್ಯಾರೇಜ್ ಆಗಿರುವ ಕಾರಣಕ್ಕಾಗಿ ಮಾನಸಿಕವಾಗಿ ಹಿಂಸೆಯನ್ನು ನೀಡುತ್ತಿದ್ದರು ಎಂದು ಮನೆಯವರಲ್ಲಿ ತಿಳಿಸಿದ್ದಳು.

ಮನೆಯವರ ಕಿರುಕುಳ ತಾಳಲಾರದೆ ನೌಸೀನ್ ಅ.24 ರಂದು ತಾಯಿ ಮನೆಗೆ ಬಂದಿದ್ದಳು. ಮರುದಿನ ಮನೆಯವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಇವಳು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆದರೆ ಇವಳ ಸಾವಿಗೆ ಗಂಡ ಮತ್ತು ಅತ್ತೆ,ನಾದಿನಿಯವರೇ ಕಾರಣವಾಗಿದೆ. ಹಾಗಾಗಿ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ನೌಸೀನ್ ಳ ಸಾವಿಗೆ ನ್ಯಾಯ ಒದಗಿಸಬೇಕು ಎಂದು ನೌಸೀನ್ ಳ ಸಂಬಂಧಿ ಸಿದ್ದೀಕ್ ಒತ್ತಾಯ ಮಾಡಿದ್ದಾರೆ.

Gayathri SG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

6 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

6 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

6 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

7 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

7 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

7 hours ago