News Karnataka Kannada
Sunday, May 05 2024
ಮಂಗಳೂರು

ಬಿಹಾರದಲ್ಲಿ ಬಾಂಬ್‌ ಸ್ಪೋಟ ಯತ್ನ: ದಕ್ಷಿಣ ಕನ್ನಡದ ಹಲವೆಡೆ ಎನ್‌ಐಎ ದಾಳಿ

NIA
Photo Credit : IANS

ಮಂಗಳೂರು: ಬಿಹಾರದ ಪಟ್ನಾದಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಬಾಂಬ್‌ ಇರಿಸಲು ಯತ್ನಿಸಿ ಬಂಧಿತರಾದ ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಎನ್‌ ಐಎ ತಂಡ ಭಾನುವಾರ ಸಂಜೆ ಬಂಟ್ವಾಳ ತಾಲೂಕಿನ ನಂದಾವರದ ಕೆಲವೆಡೆ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿದೆ.

ನಂದಾವರದ ಮೂವರ ಮನೆಗೆ ದಾಳಿ ನಡೆಸಿ ತೀವ್ರ ವಿಚಾರಣೆ ನಡೆಸಲಾಗಿದೆ. ಪಾಣೆಮಂಗಳೂರು ಮತ್ತು ಮೆಲ್ಕಾರಿನ ಸೈಬರ್‌ ಸೆಂಟರ್‌ಗಳಿಗೂ ದಾಳಿ ನಡೆಸಲಾಗಿದೆ. ಅಲ್ಲದೆ ಪುತ್ತೂರು ಬೆಟ್ಟಂಪಾಡಿ ಇರ್ದೆಯ ರಫೀಕ್‌ ಎಂಬಾತನನ್ನು ಬಂಧಿಸಿಲಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾನುವಾರ ಸಾಯಂಕಾಲ ವೇಳೆ ಹತ್ತಾರು ಪೊಲೀಸ್ ವಾಹನಗಳು ನಂದಾವರಕ್ಕೆ ಆಗಮಿಸಿದಾಗ ಸ್ಥಳೀಯರಲ್ಲಿ ಆತಂಕ ಮೂಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು