News Karnataka Kannada
Monday, April 29 2024
ಮಂಗಳೂರು

ಉಡುಪಿ ಕೃಷ್ಣ ಮಠ ಬ್ಲಾಸ್ಟ್​ಗೆ ಪ್ಲಾನ್: ಎನ್​ಐಎ ತನಿಖೆಯಲ್ಲಿ ಬಯಲು

Nia probe reveals plan for Udupi Krishna Mutt blast
Photo Credit : News Kannada

ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ, ಐಸಿಸ್ ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದ್ದು, ವಿಚಾರಣೆ ವೇಳೆ ಮತ್ತೊಂದು ಭಯಾನಕ ಅಂಶ ಬಾಯಿಬಿಟ್ಟಿದ್ದಾನೆ.

ಕರ್ನಾಟಕದಲ್ಲಿ ಮೂರು ಸ್ಥಳಗಳಲ್ಲಿ ಬಾಂಬ್​​ ಬ್ಲಾಸ್ಟ್​ ಮಾಡಲು ಸಂಚು ರೂಪಿಸಿದ್ದೇವು ಎಂದು ಹೇಳಿದ್ದಾನೆ. ಕದ್ರಿ ದೇವಸ್ಥಾನ ಟಾರ್ಗೇಟ್ ಮಾಡಲಾಗಿತ್ತು ಎಂದು ಈ ಹಿಂದೆ ಹೇಳಿದ್ದ. ಇದೀಗ ಉಡುಪಿ ಮಠ, ಚಿಕ್ಕಮಗಳೂರಿನ ಬಿಜೆಪಿ ಕಚೇರಿಯನ್ನೂ ಕೂಡ ಟಾರ್ಗೆಟ್ ಮಾಡಲಾಗಿತ್ತು ಎಂದು ಹೇಳಿದ್ದಾನೆ.

ಕದ್ರಿ ಬ್ಲಾಸ್ಟ್ ಸಕ್ಸಸ್ ಆಗಿದ್ದರೇ ನಂತರ ಉಡುಪಿ ಮಠ ಹಾಗೂ ಚಿಕ್ಕಮಗಳೂರು ಬಿಜೆಪಿ ಕಚೇರಿಯನ್ನು ಬ್ಲಾಸ್ಟ್​ ಮಾಡುತ್ತಿದ್ದೇವು. ಆದರೆ ಕದ್ರಿ ದೇವಸ್ಥಾನ ತಲುಪುವ ಮುನ್ನವೇ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು. ಹೀಗಾಗಿ ಉಡುಪಿ ಕೃಷ್ಣ ಮಠ ಹಾಗೂ ಚಿಕ್ಕಮಗಳೂರು ಬಿಜೆಪಿ ಕಚೇರಿ ಬ್ಲಾಸ್ಟ್ ಪ್ಲಾನ್ ಪ್ಲಾಫ್ ಆಗಿದೆ ಎಂದು ಹೇಳಿರುವುದು ಎನ್‌ ಐ ಎ ತನಿಖೆಯಲ್ಲಿ ಬಯಲಾಗಿದೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು