ಬೆಳ್ತಂಗಡಿ: ತಾಲೂಕಿನ ನಿಡಿಗಲ್ ನಿಂದ ಪಜಿರಡ್ಕ ಮೂಲಕ ಕನ್ಯಾಡಿಯನ್ನು ಸಂಪರ್ಕಿಸುವ ಕಲ್ಮಂಜ ಗ್ರಾಮದ ಗುಮಟಬೈಲು ಎಂಬಲ್ಲಿ ಕಾಂಕ್ರೀಟ್ ರಸ್ತೆ ಕುಸಿಯುವ ಭೀತಿ ಎದುರಾಗಿದೆ.
ಇಲ್ಲಿನ ಪರಿಸರದ ರಸ್ತೆಯು ಎತ್ತರದಲ್ಲಿದ್ದು ಅದರ ಬುಡ ಭಾಗದ ಮಣ್ಣು ಇತ್ತೀಚಿನ ದಿನಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಸವಕಳಿಗೊಂಡಿದ್ದು ರಸ್ತೆಯಲ್ಲಿ 10 ಅಡಿಗಳಿಗಿಂತ ಅಧಿಕ ಉದ್ದಕ್ಕೆ ಹಾಗೂ ಎರಡು ಅಡಿಯಷ್ಟು ಅಗಲ ಪ್ರದೇಶದಲ್ಲಿ ಕುಸಿದಿದೆ. ಇದರಿಂದ ಅಷ್ಟು ಸ್ಥಳದ ಕಾಂಕ್ರೀಟ್ ಗೆ ಬುಡ ಭಾಗದಲ್ಲಿ ಆಧಾರ ಇಲ್ಲದಂತಾಗಿದೆ. ಮುಂದಿನ ದಿನಗಳಲ್ಲಿ ಮಳೆ ಸುರಿವಾಗ ಈ ರಸ್ತೆಯ ಭಾಗ ಸಂಪೂರ್ಣ ಕುಸಿದು ಬೀಳುವ ಸಾಧ್ಯತೆ ಇದೆ ಪ್ರಸ್ತುತ ಘನವಾಹನಗಳು ಸಂಚರಿಸಿದರು ರಸ್ತೆ ಕುಸಿಯಬಹುದು. ರಸ್ತೆಯ ಇಕ್ಕೆಲಗಳಲ್ಲೂ ಚರಂಡಿ ನಿರ್ಮಿಸಲು ಜಾಗವಿಲ್ಲದ ಕಾರಣ ಇಲ್ಲಿ ಮಳೆ ನೀರು ರಸ್ತೆ ಮೂಲಕವೇ ಹರಿದು ಕುಸಿತ ಉಂಟಾದ ಜಾಗದ ಮೂಲಕವೇ ನೀರು ಮುಂದುವರಿಯುತ್ತದೆ. ಇದು ಹೆಚ್ಚಿನ ಮಣ್ಣಿನ ಸವಕಳಿಗೆ ಕಾರಣವಾಗುತ್ತಿದೆ.
ಪೂರ್ಣ ಕುಸಿದರೆ ಸಮಸ್ಯೆ: ಈಗಾಗಲೇ ಕುಸಿದಿರುವ ರಸ್ತೆ ಜಾಗದಲ್ಲಿ ಲಘು ಪ್ರಮಾಣದ ವಾಹನಗಳು ಸಂಚರಿಸಬಹುದಾಗಿದೆ. ಈ ರಸ್ತೆ ಪೂರ್ಣ ಕುಸಿದರೆ ನಿಡಗಲ್-ಪಜಿರಡ್ಡ ಸಂಪರ್ಕ ಕಡಿಯಲಿದೆ. ಈ ಪರಿಸರದ ನೂರಾರು ಮನೆಗಳಿಗೆ ಈ ರಸ್ತೆಯ ಅನಿವಾರ್ಯತೆ ಇದೆ.
ರಸ್ತೆ ಪೂರ್ಣ ಕುಸಿದರೆ ಇದರಿಂದ ಸಾಕಷ್ಟು ಶಾಲಾ ಮಕ್ಕಳು ಹೈನುಗಾರರು ಸಮಸ್ಯೆಗೊಳಗಾಗಲಿದ್ದಾರೆ. ಒಟ್ಟು ಏಳು ಕಿಮೀ. ವ್ಯಾಪ್ತಿಯ ಬಹು ಬೇಡಿಕೆಯ ಈ ರಸ್ತೆಯ ಈ ಭಾಗದ ಕಾಮಗಾರಿ ಕಳೆದ ಎರಡು ವರ್ಷಗಳ ಹಿಂದೆ ನಡೆಸಲಾಗಿತ್ತು. ಸಂಬಂಧಪಟ್ಟ ಇಲಾಖೆ ಈ ಬಗ್ಗೆ ತಕ್ಷಣ ಗಮನಹರಿಸಿ ಇಲ್ಲಿ ತ್ವರಿತ ಕಾಮಗಾರಿ ನಡೆಸುವ ಅಗತ್ಯವಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…
ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…