News Karnataka Kannada
Tuesday, April 30 2024
ಮಂಗಳೂರು

ಕುದ್ರೋಳಿ ದಸರಾ ಮೆರವಣಿಗೆಯಲ್ಲಿ “ದೈವಗಳ ಸ್ತಬ್ಧ ಚಿತ್ರ”ಕ್ಕಿಲ್ಲ ಅವಕಾಶ

No 'tableau of deities' allowed in Kudroli Dasara procession
Photo Credit : News Kannada

ಮಂಗಳೂರು: ಈ ಬಾರಿಯ ಕುದ್ರೋಳಿ ದಸರಾ ಮೆರವಣಿಗೆಯಲ್ಲಿ ತುಳುನಾಡಿನ ದೈವ ದೇವರಗಳನ್ನು ಅವಹೇಳನ ಮಾಡುವ ಸ್ತಬ್ಧ ಚಿತ್ರಗಳಿಗೆ ಅವಕಾಶ ಇಲ್ಲ ಎಂದು ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಹೇಳಿದರು.

ಮಂಗಳೂರು ದಸರಾ ಮಹೋತ್ಸವ ಸಿದ್ಧತೆ ಹಾಗೂ ಸಂಘ-ಸಂಸ್ಥೆಗಳಿಗೆ ಜವಾಬ್ದಾರಿ ಹಂಚಿಕೆಗಾಗಿ ಕುದ್ರೋಳಿಯಲ್ಲಿ ಭಾನುವಾರ ಸ್ವಯಂಸೇವಕರು ಮತ್ತು ಸಂಘ ಸಂಸ್ಥೆಗಳ ವಿಶೇಷ ಸಭೆಯಲ್ಲಿ ಮಾತನಾಡಿದರು. ಸಾಮರಸ್ಯದ ದಸರಾದಲ್ಲಿ ಪಾಲ್ಗೊಳ್ಳಲು ಹೊಸ ಸಂಘ ಸಂಸ್ಥೆಗಳು ಆಸಕ್ತಿ ವಹಿಸಿವೆ. ದಸರಾ ಮೆರವಣಿಗೆ ಅ.24ರಂದು ಸಂಜೆ 4ಕ್ಕೆ ಆರಂಭವಾಗಲಿದೆ.

ಮೆರವಣಿಗೆಯ ಟ್ಯಾಬ್ಲೊಗಳಲ್ಲಿ ಯಾವುದೇ ಜಾತಿ, ಮತ, ಸಮುದಾಯ, ಭಾವನೆಗಳಿಗೆ ಧಕ್ಕೆಯಾಗದಂತೆ ಎಚ್ಚರ ವಹಿಸಬೇಕು. ನಾಸಿಕ್ ಬ್ಯಾಂಡ್ ತಂಡಗಳು ಈ ಬಾರಿ ಪೊಲೀಸ್ ಇಲಾಖೆಯಿಂದ ವಿಶೇಷ ಅನುಮತಿ ಪಡೆಯಬೇಕು ಎಂದು ಸೂಚನೆ ಬಂದಿದ್ದು, ಇದನ್ನು ಎಲ್ಲರೂ ಪಾಲಿಸಬೇಕು. ಮುಖ್ಯವಾಗಿ ತುಳುನಾಡಿನ ದೈವ ದೇವರಗಳನ್ನು ಅವಹೇಳನ ಮಾಡುವ ಸ್ತಬ್ಧ ಚಿತ್ರಗಳಿಗೆ ಅವಕಾಶ ಇಲ್ಲ.

ಕನ್ನಡ ಸಂಸ್ಕೃತಿ ಇಲಾಖೆಯ ಕಲಾತಂಡಗಳಿಗೂ ಸೂಕ್ತ ವ್ಯವಸ್ಥೆ ಮಾಡಿಕೊಡುವ ಜವಾಬ್ದಾರಿಯಿದ್ದು, ಸ್ವಯಂಸೇವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು