ಮಂಗಳೂರು: ತನ್ನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಉತ್ತರ ಭಾರತ ಮೂಲದ ವ್ಯಕ್ತಿಯೊಬ್ಬನನ್ನು ಬೆಂಕಿ ಕೊಟ್ಟು ಸಾಯಿಸಿ ವಿದ್ಯುತ್ ಶಾಕ್ ಆಗಿ ಸತ್ತಿದ್ದಾಗಿ ನಾಟಕ ಮಾಡಿರುವ ಘಟನೆ ನಗರದ ಪಾಂಡೇಶ್ವರ ಠಾಣೆ ವ್ಯಾಪ್ತಿಯ ಮುಳಿಹಿತ್ಲು ಎಂಬಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಳಿಹಿತ್ಲು ಜಂಕ್ಷನ್ ನಲ್ಲಿ ಮಶುಪಾ ಜನರಲ್ ಸ್ಟೋರ್ ಎಂಬ ಅಂಗಡಿಯಿದ್ದು, ಅದರಲ್ಲಿ ಗಟ್ಯಾನ್ ಥಿ ಜಗು ಎಂಬ ಉತ್ತರ ಭಾರತ ಮೂಲದ ವ್ಯಕ್ತಿ ಕೆಲಸ ಮಾಡಿಕೊಂಡಿದ್ದ ಜನರಲ್ ಸ್ಟೋರ್ ಮಾಲೀಕ ತೌಲಿನ್ ಹಸನ್ (32) ಆ ವ್ಯಕ್ತಿಯನ್ನು ಅಂಗಡಿಯಲ್ಲಿ ನಿಲ್ಲಿಸಿದ್ದಲ್ಲದೆ ಅದೇ ಕಟ್ಟಡದ ಹಿಂಭಾಗದಲ್ಲಿ ಕೊಠಡಿ ಕೊಟ್ಟು ಉಳಿಯಲು ವ್ಯವಸ್ಥೆ ಮಾಡಿದ್ದ. ಶನಿವಾರ ಮಧ್ಯಾಹ್ನ ಯಾವುದೋ ದ್ವೇಷದಿಂದ ತೌಲಿನ್ ಹಸನ್ ಯುವಕನಿಗೆ ಬೆಂಕಿ ಕೊಟ್ಟಿದ್ದಾನೆ ಎನ್ನಲಾಗುತ್ತಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಧ್ಯಾಹ್ನ 1.30ರ ಸುಮಾರಿಗೆ ಬೆಂಕಿಯಿಂದ ಸುಟ್ಟ ಗಾಯಗಳಾಗಿದ್ದ ಜಗು ಅನ್ನು ತೌಲಿನ್ ವೆನ್ಲಾಕ್ ಆಸ್ಪತ್ರೆಗೆ ಸೇರಿಸಿದ್ದ ಇದೇ ವೇಳೆ ಆತನಿಗೆ ಟ್ರಾನ್ಸ್ ಫಾರ್ಮರ್ ಕಂಬದ ಬಳಿ ಶಾಕ್ ಆಗಿದೆಯೆಂದು ಸ್ಥಳೀಯರು ಮತ್ತು ಪೊಲೀಸರಲ್ಲಿ ತಪ್ಪು ಮಾಹಿತಿ ನೀಡಿದ್ದ ಅಲ್ಲದೆ ಪ್ರಕರಣವನ್ನು ಮುಚ್ಚಿ ಹಾಕಲು ನೋಡಿದ್ದ. ಪೊಲೀಸರು ತೌಲಿನ್ ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ವಿಚಾರ ಬಾಯಿಬಿಟ್ಟಿದ್ದಾನೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…