News Karnataka Kannada
Thursday, May 09 2024
ಮಂಗಳೂರು

ಮಂಗಳೂರು: ಹೆಸರಾಂತ ಲೇಖಕಿ ಸಾರಾ ಅಬೂಬಕ್ಕರ್ ನಿಧನ

Noted writer Sara Aboobacker passes away in Mangaluru
Photo Credit : News Kannada

ಮಂಗಳೂರು: ಹೆಸರಾಂತ ಲೇಖಕರಾದ ಸಾರಾ ಅಬೂಬಕ್ಕರ್ ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು.

ಸಾರಾ ಅಬೂಬಕ್ಕರ್ ಅವರ ಸಾಹಿತ್ಯ ಕೃಷಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಮುಂತಾದ ಪುರಸ್ಕಾರ ದೊರೆತಿದೆ.

ಅವರು 1936ರ ಜೂನ್ 30ರಂದು  ಕಾಸರಗೋಡಿನ ಚಂದ್ರಗಿರಿ ತೀರದ  ಗ್ರಾಮವೊಂದರಲ್ಲಿ ಜನಿಸಿದರು. ತಂದೆ ನ್ಯಾಯವಾದಿಗಳಾಗಿದ್ದ ಪಿ. ಅಹಮದ್ ಅವರು ಮತ್ತು  ತಾಯಿ ಚೈನಾಬಿ ಅವರು.

ಅವರು ಬರೆದ ಮೊದಲ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಲಂಕೇಶ್ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತು. ನಂತರ ಅವರು ಬರೆದ ಇತರ ಹಲವಾರು ಕಾದಂಬರಿಗಳೆಂದರೆ ಸಹನಾ, ವಜ್ರಗಳು, ಕದನವಿರಾಮ, ಸುಳಿಯಲ್ಲಿ ಸಿಕ್ಕವರು, ಪ್ರವಾಹ-ಸುಳಿ (ಸುಳಿಯಲ್ಲಿ ಸಿಕ್ಕವರು ಕೃತಿಯ ಭಾಗ-೨), ತಳ ಒಡೆದ ದೋಣಿ, ಪಂಜರ ಮುಂತಾದವು.

ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು