Categories: ಮಂಗಳೂರು

ಏ.23ರಂದು ಮಂಗಳೂರಿನಲ್ಲಿ ನೋವಿಗೋ ಸೊಲ್ಯುಶನ್ಸ್ ಹೊಸ ಶಾಖೆ ಉದ್ಘಾಟನೆ

ಮಂಗಳೂರು:  ಹೆಸರಾಂತ ಐಟಿ ಕಂಪನಿ ನೋವಿಗೋ ಸೊಲ್ಯುಶನ್ಸ್ ಹೊಸ ಶಾಖೆ  ಮಂಗಳೂರು ನಗರದ ಫಳ್ನೀರ್ ನಲ್ಲಿ ಏ.23ರಂದು ಸಂಜೆ 5 ಗಂಟೆಗೆ ಹೊಸ ಶಾಖೆ ಉದ್ಘಾಟನೆಗೊಳ್ಳಲಿದೆ.

ನೋವಿಗೋ ಸೊಲ್ಯುಶನ್ಸ್  2012 ರಲ್ಲಿ ಮಂಗಳೂರು, ಬೆಂಗಳೂರು ನಗರದಲ್ಲಿಆರಂಭಗೊಂಡಿತ್ತು. ಉದ್ಘಾಟನಾ ಸಮಾರಂಭದಲ್ಲಿ ಇನ್ಫೋಸಿಸ್ ಬಿಪಿಎಮ್ ಲಿ.ಸಿಇಒ ಮತ್ತು ಎಂ.ಡಿ, ಎಕ್ಸಿಕ್ಯೂಟೀವ್‌ ಉಪಾಧ್ಯಕ್ಷರಾದ ಅನಂತ ರಾಧಾಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಜೊತೆಗೆ ವಿವಿಧಗಣ್ಯರು ಉಪಸ್ಥಿತರಿರಲಿದ್ದಾರೆ.

ಮಂಗಳೂರಿನಲ್ಲಿ ನೋವಿಗೋ ಸೊಲ್ಯುಶನ್ಸ್ ಕಂಪನಿ ಪ್ರಬಲವಾಗಿ ಬೆಳೆಯುತ್ತಿದ್ದು ಮೂರು ವರ್ಷಗಳಲ್ಲಿ ಅನಿಯಮಿತ ಸಾಧನೆ ದಾಖಲಿಸಿದೆ. ದುಬೈ, ಯುಎಇ, ಯುಕೆ, ಸಿಂಗಾಪುರದಲ್ಲಿ ಶಾಖೆ ಹೊಂದಿದ್ದು ಡಲ್ಲಾಸ್‌ ಟೆಕ್ಸಾಸ್‌ನಲ್ಲಿ ಪ್ರಧಾನ ಕಚೇರಿ ಹೊಂದಿದೆ. ಮಂಗಳೂರು, ಬೆಂಗಳೂರು, ಚೆನ್ನೈ ಮತ್ತು ಕೊಚ್ಚಿಯಲ್ಲಿ ಶಾಖೆ ವಿಸ್ತರಿಸುತ್ತಿದ್ದು, ಮುಂದಿನ ವರ್ಷದಲ್ಲಿ ಕೆನಡಾ, ಕತಾರ್, ನೆದರ್‌ಲ್ಯಾಂಡ್ಸ್ ದೇ‌ಶದಲ್ಲಿ ಹೊಸ ಶಾಖೆಯು ಕಾರ್ಯಾಚರಿಸಲಿದೆ.

2025ರ ವೇಳೆಗೆ 1,500ಕ್ಕೂ ಹೆಚ್ಚು ಉದ್ಯೋಗ ದೊರಕಿಸುವ ಯೋಜನೆ ಹೊಂದಿದೆ. ಪ್ರಸ್ತುತ 700ಕ್ಕೂ ಅಧಿಕ ಐಟಿ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಮಂಗಳೂರು ನಗರದ ಫಳ್ನೀರ್ ನಲ್ಲಿ ಕರುಣಾ ಪ್ರೈಡ್ ಸೆಂಟರಿನ ಐದನೇ ಮಹಡಿಯಲ್ಲಿ ಹೊಸ ಶಾಖೆ ಆರಂಭಿಸುತ್ತಿದೆ. ಮಂಗಳೂರಿನ ಪ್ರವೀಣ್‌ ಕುಮಾರ್‌ಕಲ್ಬಾವಿ, ನೊವಿಗೋ ಸೊಲ್ಯುಶನ್ಸ್ ಕಂಪನಿಯ ಸಂಸ್ಥಾಪಕ ಮತ್ತು ಸಿಇಓ ಆಗಿದ್ದು, ಚೀಫ್‌ ಟೆಕ್ನೋಲಜಿ ಅಫೀಸರ್ ಮತ್ತು ಸಹ ಸಂಸ್ಥಾಪಕರಾಗಿರುವ ಮೊಹಮ್ಮದ್ ಹನೀಫ್, ಚೀಫ್‌ ಆಪರೇಟಿಂಗ್‌ ಆಫೀಸರ್ ಮತ್ತು ಸಹ ಸಂಸ್ಥಾಪಕರಾಗಿರುವ ಮೊಹಮ್ಮದ್‌ ಜರೋದ್, ಚೀಫ್‌ ಕಸ್ಟೋಮರ್‌ ಆಫೀಸರ್ ಮತ್ತು ಸಹ ಸಂಸ್ಥಾಪಕರಾದ ಶಿಹಾಬ್ ಕಲಂದರ್‌ಅವರು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯಕಾರ್ಯನಿರ್ವಾಹಕಅಧಿಕಾರಿ ಪ್ರವೀಣ್‌ಕುಮಾರ್‌ಕಲ್ಭಾವಿ, ಸಹ-ಸಂಸ್ಥಾಪಕ ಮತ್ತು ಮುಖ್ಯ ತಂತ್ರಜ್ಞಾನ ಅಧಿಕಾರಿ ಮೊಹಮ್ಮದ್ ಹನೀಫ್, ಸಹ-ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್‌ಜರೂದ್, ಸಹ-ಸಂಸ್ಥಾಪಕ ಮತ್ತು ಮುಖ್ಯ ಗ್ರಾಹಕ ಅಧಿಕಾರಿ ಶಿಹಾಬ್ ಕಲಂದರ್ ಹಾಜರಿದ್ದರು.

Gayathri SG

Recent Posts

ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರೋದೇ ಡೌಟ್; ರಿಟರ್ನ್‌ ಟಿಕೆಟ್‌ ಕ್ಯಾನ್ಸಲ್

ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…

17 mins ago

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

35 mins ago

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

57 mins ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

1 hour ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

1 hour ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

2 hours ago