ಮಂಗಳೂರು: ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜ್ ಕಾರ್ಯಕ್ರಮಕ್ಕೆ ಶ್ರೀಕಾಂತ್ ಶೆಟ್ಟಿ ಆಗಮನ ವಿಚಾರವಾಗಿ ದ.ಕ ಜಿಲ್ಲಾ ಎನ್ಎಸ್ಯುಐ ವಿರೋಧ ವ್ಯಕ್ತಪಡಿಸಿದೆ.
ದ.ಕ ಜಿಲ್ಲಾಧಿಕಾರಿ, ಮಂಗಳೂರು ಪೊಲೀಸ್ ಸಹಾಯ ಆಯುಕ್ತರಿಗೆ ಮನವಿ ನೀಡಿದ ಎನ್ಎಸ್ಯುಐ, ಕೋಮು ಭಾವನೆ ಕೆರಳಿಸುವ ವ್ಯಕ್ತಿಗಳಿಗೆ ಸರ್ಕಾರಿ ಕಾಲೇಜು ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು. ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಮಧ್ಯೆ ಕೋಮು ಭಾವನೆ ಕೆರಳಿಸುವ ಕಾರ್ಯ ರಿಂದ ಆಗುತ್ತದೆ.. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತರಲಾಗಿದೆ.
ಕಾರ್ಯಕ್ರಮಕ್ಕೆ ಶ್ರೀಕಾಂತ್ ಶೆಟ್ಟಿ ಬಂದರೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ ಎನ್ಎಸ್ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಕಾರ್ಯಕ್ರಮದ ಅತಿಥಿ ಬದಲಾವಣೆ ಮಾಡಲು ಮನವಿ ಮಾಡಿದ್ದಾರೆ.