ಮಂಗಳೂರು: ಬಜರಂಗದಳ ವಿಶ್ವಹಿಂದು ಪರಿಷತ್ ಮತ್ತು ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಹಕಾರ್ಯದರ್ಶಿ ಶರಣ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಮಾನಹಾನಿಕರ ಮತ್ತು ಸುಳ್ಳು ಸುದ್ದಿಯ ವೀಡಿಯೋಗಳನ್ನು ಹರಿಯಬಿಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗುರುವಾರ ವಿಶ್ವಹಿಂದೂ ಪರಿಷತ್ ಮಂಗಳೂರು ವತಿಯಿಂದ ನಗರ ಪೊಲೀಸ್ ಸಲ್ಲಿಸಲಾಯಿತು.
ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಮನವಿ ಸ್ವೀಕರಿಸಿದರು. ವಿಎಚ್ ಪಿ ಕರ್ನಾಟಕ ದ. ಪ್ರಾಂತದ ಕಾರ್ಯಾಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್, ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ಕಾರ್ಯದರ್ಶಿ ಶಿವಾನಂದ ಮೆಂಡನ್, ಪ್ರಮುಖರಾದ ಪುನೀತ್ ಅತ್ತಾವರ, ಭುಜಂಗ ಕುಲಾಲ್, ಸಂತೋಷ್ ಕದ್ರಿ, ಮನೋಕ ಸುವರ್ಣ ಉಪಸ್ಥಿತರಿದ್ದರು.