ಮಂಗಳೂರು

ಟ್ರೇಡ್‌ ಲೈಸನ್ಸ್ ಇಲ್ಲದ ಎಂಎಫ್‌ ಸಿ ಆಹಾರ ಮಳಿಗೆ ಮೇಲೆ ಅಧಿಕಾರಿಗಳ ದಾಳಿ

ಮಂಗಳೂರು: ಮಂಗಳೂರು ನಗರದ ಫಳ್ನಿರ್ ನಲ್ಲಿ ಎಂಎಫ್ ಸಿ ಆಹಾರ ಮಳಿಗೆಯ ಮೇಲೆ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದು, 24 ಗಂಟೆಯಲ್ಲಿ ಟ್ರೇಡ್ ಲೈಸನ್ಸ್ ಇನ್ನಿತರ ದಾಖಲೆಗಳನ್ನು ಹಾಜರುಪಡಿಸದೇ ಇದ್ದರೆ ಕೇಂದ್ರಕ್ಕೆ ಬೀಗ ಜಡಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಎಂಎಫ್ ಸಿ ಮಳಿಗೆಯಿರುವ ಕಟ್ಟಡದ ಮಾಲಕರ ದೂರಿನಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದ್ದು ಅಧಿಕಾರಿಗಳು ಒಳಗೆ ಬರುತ್ತಿದ್ದಂತೆ ಮಳಿಗೆಯ ಮಾಲಕರು ತಡೆದು ತೀವ್ರ ಜಟಾಪಟಿ ನಡೆಸಿದ್ದಾರೆ. ನಾವು ತಪಾಸಣೆ ನಡೆಸುವುದಕ್ಕೆ ಆಗಮಿಸಿದ್ದು ಎಂದು ಅಧಿಕಾರಿಗಳು ಹೇಳಿದರೆ, ಹೊಟೇಲ್ ಮಾಲಕರು ಒಳಗೆ ಬಂದು ತಪಾಸಣೆ ನಡೆಸುವುದಕ್ಕೆ ಬಿಡಲ್ಲ ಎಂದು ತಡೆದಿದ್ದಾರೆ.

ನಾವು ಎಲ್ಲ ಲೈಸನ್ಸ್ ಇದ್ದುಕೊಂದೇ ವ್ಯವಹಾರ ನಡೆಸುತ್ತಿದ್ದೇವೆ, ಹೊಟೇಲ್ ಒಳಗಡೆ ಉತ್ತಮ ಸೌಲಭ್ಯವನ್ನೂ ಹೊಂದಿದ್ದೇವೆ ಎಂದು ಮಾಲಕ ಸಿದ್ಧಿಕ್ ಹೇಳಿದ್ದು ಅಧಿಕಾರಿ ಸಿಬಂದಿಯನ್ನು ತರಾಟೆಗೆತ್ತಿಕೊಂಡಿದ್ದಾರೆ.

ನಮ್ಮ ಆಹಾರ ಮಳಿಗೆ ಯಾವುದೇ ಕಾನೂನು ಉಲ್ಲಂಘಿಸಿಲ್ಲ, ನಾವು ಟ್ರೇಡ್ ಲೈಸನ್ಸ್ ಗಾಗಿ ಸಲ್ಲಿಸಿರುವ ಅರ್ಜಿಯನ್ನು ಇಲಾಖೆಯಿಂದ ನಿರಾಕರಿಸಿಯೂ ಇಲ್ಲ. 2017ರಿಂದ ಇದೇ ಜಾಗದಲ್ಲಿ ನಾವು ಬಿಸಿನೆಸ್ ಹೊಂದಿದ್ದೇವೆ. ಈಗ ಅಧಿಕಾರಿಗಳು ಕೆಲವು ಬಾಡಿಗೆ ಗೂಂಡಾಗಳನ್ನು ಜೊತೆಗೆ ಕರೆದುಕೊಂಡು ಬಂದಿದ್ದಾರೆ, ಯಾರಿಂದಲೋ ಲಂಚ ಪಡೆದು ದಾಳಿಗೆ ಬಂದಿದ್ದಾರೆ ಎಂದು ಸಿದ್ದಿಕ್ ಆರೋಪ ಮಾಡಿದ್ದಾರೆ. ಕೊನೆಗೆ, 24 ಗಂಟೆಯ ಗಡುವು ಕೊಡುತ್ತೇವೆ, ಸೂಕ್ತ ಟ್ರೇಡ್ ಲೈಸನ್ಸ್ ಇನ್ನಿತರ ದಾಖಲೆ ಪತ್ರಗಳನ್ನು ಇಲಾಖೆಗೆ ಹಾಜರುಪಡಿಸಬೇಕು ಎಂದು ಹೇಳಿ ಅಧಿಕಾರಿಗಳು ಹೊರ ನಡೆದಿದ್ದಾರೆ.

Ashika S

Recent Posts

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

44 mins ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

58 mins ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

2 hours ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago