News Karnataka Kannada
Friday, May 10 2024
ಮಂಗಳೂರು

ಉಳ್ಳಾಲದಲ್ಲಿ ಓರ್ವ ವ್ಯಕ್ತಿ ಮೇಲೆ ದಾಳಿ ಆಗಿದೆ ಎಂಬ ಸುದ್ದಿಗೆ ಸ್ಪಷ್ಟನೆ ನೀಡಿದ ಎನ್. ಶಶಿಕುಮಾರ್

On the news that a person was attacked in Ullal, N. Sasikumar
Photo Credit : News Kannada

ಮಂಗಳೂರು: ಕರಾವಳಿಯಲ್ಲಿ ಮತ್ತೆ ಆತಂಕಕ್ಕೆ ಕಾರಣವಾಗಿದ್ದ ‘ಉಳ್ಳಾಲದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ಯತ್ನ’ ವದಂತಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟನೆ ನೀಡಿದ್ದು, ಇದು ಕೇವಲ ವದಂತಿಯಾಗಿದೆ, ಇದರಲ್ಲಿ ಸತ್ಯಾಂಶವಿಲ್ಲ ಎಂದಿದ್ದಾರೆ.

‘ಹಲ್ಲೆ’ ನಡೆದಿದೆ ಎನ್ನಲಾದ ವ್ಯಕ್ತಿಯನ್ನು ವಿಚಾರಿಸಲಾಗಿದೆ. ಈ ಬಗ್ಗೆ ಆ ವ್ಯಕ್ತಿಯೇ ಇದೊಂದು ವದಂತಿ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಉಳ್ಳಾಲದ ಬಿಜೆಪಿ ಕಾರ್ಯಕರ್ತರೋರ್ವರು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅವರ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ಯತ್ನ ನಡೆಸಿದ್ದರು ಎಂದು ಹಬ್ಬುತ್ತಿರುವ ಸುದ್ದಿ ಈಗಷ್ಟೇ ತಣ್ಣಗಾಗುತ್ತಿರುವ ಕರಾವಳಿಯಲ್ಲಿ ಮತ್ತೆ ಕಾವೇರಲು ಕಾರಣವಾಗಿತ್ತು. ಈ ವದಂತಿ ಹರಡಿದವರ ಬಗ್ಗೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು