Categories: ಮಂಗಳೂರು

ಕೆಎಂಸಿ ಆಸ್ಪತ್ರೆ ಅತ್ತಾವರದಲ್ಲಿ “ನೋವು ಮುಕ್ತ ಮಂಗಳೂರು” ಅಭಿಯಾನ

ಮಂಗಳೂರು: ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದ ರುಮಟಾಲಜಿ (ಸಂಧಿವಾತ) ವಿಭಾಗ ಹಾಗೂ ಫಿಸಿಕಲ್ ಮೆಡಿಸಿನ್ ಮತ್ತು ರಿಹ್ಯಾಬಿಲಿಟೇಶನ್ (ದೈಹಿಕ ಔಷಧ ಮತ್ತು ಪುನರ್ವಸತಿ) ವಿಭಾಗವು ಜಂಟಿಯಾಗಿ ಮಂಗಳೂರಿನಲ್ಲಿ ಮೊದಲ ಬಾರಿಗೆ “ನೋವು ಮುಕ್ತ ಮಂಗಳೂರು” ಅಭಿಯಾನವನ್ನು ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ಆಯೋಜಿಸುತ್ತಿದೆ.

ಈ ಅಭಿಯಾನವು ಮೇ 6 ರಿಂದ ಮೇ 11 ರವರೆಗೆ ಬೆಳಗ್ಗೆ 9.30 ರಿಂದ ಸಂಜೆ 4.30 ರವರೆಗೆ ಹಮ್ಮಿಕೊಳ್ಳಲಾಗಿದ್ದು ಸಂಧಿ ನೋವು, ಕುತ್ತಿಗೆ ನೋವು/ ಬೆನ್ನು ನೋವು. ಕೈಗಳು ಮತ್ತು ಪಾದಗಳಲ್ಲಿ ಉರಿಯ ಅನುಭವ, ನರ ಸಂಬಂಧಿ ನೋವುಗಳಿಂದ ಬಳಲುತ್ತಿರುವವರು ಈ ನೋವು ಮುಕ್ತ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಆರ್ಥೈಟಿಸ್ (ರುಮಟಾಯ್ಡ್ ಆರ್ಥೈಟಿಸ್, ಸೋರಿಯಾಟಿಕ್ ಆರ್ಥೈಟಿಸ್, ಅಂಕಿಲೋಸಿಂಗ್ ಸ್ಪಾಂಡಿಲೈಟಿಸ್) ಓಸ್ಟಿಯೊಆರ್ಥೈಟಿಸ್, ಗೌಟ್, ಬೆನ್ನುಹುರಿ ಗಾಯಗಳಿಂದಾಗಿ ನೋವು/ ಲಕ್ವಾ, ಫೈಬೊಮಯಾಲ್ಟಿಯಾ/ ಮೇಯೊಫೇಶಿಯಲ್ ಪೈನ್ ಸಿಂಡೋಮ್, ಮಯೋಸೈಟಿಸ್‌/ ಎಸ್‌.ಎಲ್ಏ. ಮುಂತಾದ ಸಮಸ್ಯೆಗಳಿಗೆ ರುಮಟಾಲಜಿ ಮತ್ತು ಫಿಸಿಕಲ್ ಮೆಡಿಸಿನ್ ಪುನರ್ವಸತಿ ತಜ್ಞರಿಂದ ಉಚಿತ ಸಮಾಲೋಚನೆಯು ದೊರೆಯಲಿದೆ.

ಶಿಬಿರದಲ್ಲಿ ಸಮಾಲೋಚನೆ ಮತ್ತು ಫಿಸಿಯೋಥೆರಪಿ ಉಚಿತವಾಗಿದ್ದು ಲ್ಯಾಬೋರೇಟರಿ ಪರೀಕ್ಷೆಗಳಿಗೆ ವಿಶೇಷ ರಿಯಾಯಿತಿಯನ್ನು ನೀಡಲಾಗುವುದು. ಈ ಶಿಬಿರವು ಅಪಾಯಿಂಟ್ಮೆಂಟ್ ಆಧಾರಿತವಾಗಿರುತ್ತದೆ.

ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಕೆಎಂಸಿ ಆಸ್ಪತ್ರೆ, ಅತ್ತಾವರದ ವೈದ್ಯಕೀಯ ಅಧೀಕ್ಷಕರು ಕರೆ ನೀಡಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ನೋಂದಾವಣೆ/ ಸಮಯ ಕಾಯ್ದಿರಿಸಿಕೊಳ್ಳಲು ದಯವಿಟ್ಟು 7022078002 ಕ್ಕೆ ಕರೆ ಮಾಡಿ.

Ashika S

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

6 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

15 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

27 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

46 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

51 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

60 mins ago