News Karnataka Kannada
Sunday, May 05 2024
ಮಂಗಳೂರು

ಬಂಟ್ವಾಳ: ಮೂರ್ಕಜೆ ಕೊಡಂಗಾಯಿ ಪಂಚತೀರ್ಥದಲ್ಲಿ ಪಂಚಲಿಂಗೇಶ್ವರ ದೇವರ ಅವಭೃತ ಸ್ನಾನ ಘಟ್ಟ ಲೋಕಾರ್ಪಣೆ

Panchalingeshwara Deva's avabhruta snan ghat inaugurated at Moorkaje Kodangayi Panchatheertha
Photo Credit : News Kannada

ಬಂಟ್ವಾಳ: ಸಣ್ಣ ನೀರಾವರಿ ಇಲಾಖೆ ಮೂಲಕ 45 ಲಕ್ಷ ರೂ. ವೆಚ್ಚದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರವಿಶೇಷ ಪ್ರಯತ್ನದ ಮೂಲಕ ನಿರ್ಮಾಣವಾದ ವಿಟ್ಲ ಪಡ್ನೂರು ಗ್ರಾಮದ ಮೂರ್ಕಜೆ ಕೊಡಂಗಾಯಿ ಪಂಚತೀರ್ಥದಲ್ಲಿ ಪಂಚಲಿಂಗೇಶ್ವರ ದೇವರ ಅವಭೃತ ಸ್ನಾನ ಘಟ್ಟ ಜ.24 ರಂದು ಬೆಳಿಗ್ಗೆ ಲೋಕಾರ್ಪಣೆಗೊಂಡಿತು.

ಬೆಳಗ್ಗೆ ಸ್ನಾನಘಟದಲ್ಲಿ ಗಂಗಾ ಪೂಜೆ ಹಾಗೂ ವಿಟ್ಲ ಅರಮನೆಯ ಕೃಷ್ಣಯ್ಯ ಬಲ್ಲಾಳ್ ದೀಪ ಬೆಳಗಿಸಿ ಲೋಕಾರ್ಪಣೆ ಮಾಡಿದರು.

ವಿಟ್ಲ ಸೀಮೆಗೆ ಸಂಬಂಧಿಸಿದ ಕೊಡಂಗಾಯಿ ನದಿಯ ನೀರು ಕಸಕಡ್ಡಿಗಳಿಂದ ಕಲುಷಿತಗೊಂಡಿದ್ದು, ಶಾಸಕರ ವಿಶೇಷ ಪ್ರಯತ್ನದ ಫಲವಾಗಿ ತಡೆಗೋಡೆ ನಿರ್ಮಾಣ ಹಾಗೂ ಮೆಟ್ಟಿಲುಗಳನ್ನು ನಿರ್ಮಾಣ ಮಾಡಿ ನದಿಯಲ್ಲಿ ಸ್ನಾನಘಟ್ಟವನ್ನು ನಿರ್ಮಾಣ ಮಾಡಲಾಗಿದೆ.

ಈ ಭಾಗದ ಜನರ ಜೊತೆಗೆ ಭಕ್ತರಿಗೆ ಅನುಕೂಲವಾಗುವಂತೆ ಜೊತೆಗೆ ಇದೇ ನದಿಗೆ ಶಾಸಕರ ಅನುದಾನದ ಮೂಲಕ ಕೃಷಿ ಹಾಗೂ ಜಲವೃದ್ದಿಗಾಗಿ ಕಿಂಡಿಅಣೆಕಟ್ಟು ನಿರ್ಮಾಣದ ಕಾರ್ಯ ಅಂತಿಮವಾಗಿದ್ದು, ಮುಂದಿನ ದಿನಗಳಲ್ಲಿ ಕೃಷಿಕರು ಇದರ ಸದುಪಯೋಗ ಪಡೆಯಲು ಅನುಕೂಲವಾಗಿದೆ.

ಸಭೆಯ ಅಧ್ಯಕ್ಷತೆಯನ್ನು ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರು ರೇಷ್ಮಾ ಶಂಕರಿ ಬಲಿಪಗುಳಿ ವಹಿಸಿದರು, ವೇದಿಕೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೀತಾರಾಮ ಕೆದಿಲಾಯ, ಅಜಯ ಟ್ರಸ್ಟಿನ ಸದಸ್ಯರಾದ ರವೀಂದ್ರ ಪುಣಚ, ಕಟ್ಟೆ ಸಮಿತಿಯ ಅಧ್ಯಕ್ಷ ಮಂಜಯ್ಯ ಶೆಟ್ಟಿ, ಗ್ರಾಮ ಪಂಚಾಯತ ಉಪಾಧ್ಯಕ್ಷ ನಾಗೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರವೀಶ ಶೆಟ್ಟಿ ಕರ್ಕಳ, ಹಾಗೂ ಸಭೆಯಲ್ಲಿ ಮೈತ್ರಿ ಗುರುಕುಲ ಬಳಗ, ಗ್ರಾಮ ಪಂಚಾಯತಿ ಸದಸ್ಯರು, ಕಟ್ಟೆ ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು