News Karnataka Kannada
Saturday, April 27 2024
ಮಂಗಳೂರು

ನಿರ್ವಹಣೆ ಇಲ್ಲದೆ ನಿಂತಲ್ಲೇ ನಿಂತಿವೆ ಪಶು ಸಂಜೀವಿನಿ ವಾಹನ

Pashu Sanjeevini vehicles parked without maintenance
Photo Credit : News Kannada

ಮಂಗಳೂರು: ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ 108 ಆ್ಯಂಬುಲೆನ್ಸ್‌ ಮಾದರಿಯಲ್ಲಿಯೇ ಜಾನುವಾರುಗಳಿಗೆ ಚಿಕಿತ್ಸೆ ನೀಡಲು ಜಾರಿ ಮಾಡಲಾದ ಪಶು ಸಂಜೀವಿನಿ ವಾಹನಗಳು (ರೈತರ ಮನೆಯ ಬಾಗಿಲಿಗೆ ಹೋಗಿ ಚಿಕಿತ್ಸೆ ನೀಡುವ ಯೋಜನೆ) ಎಲ್ಲಾ ಜಿಲ್ಲೆಯಲ್ಲಿ ನಿರ್ವಹಣೆ ಇಲ್ಲದೆ ನಿಂತಲ್ಲೇ ನಿಂತಿವೆ.

ಜಾನುವಾರು ಪಾಲಕರ ಮನೆ ಬಾಗಿಲಿಗೆ ಹೋಗಿ ಅಗತ್ಯ ಚಿಕಿತ್ಸೆ ನೀಡುವ ವ್ಯವಸ್ಥೆಯ ಪಶು ಸಂಜೀವಿನಿ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಅದರಂತೆ ಮತಕ್ಷೇತ್ರಕ್ಕೊಂದರಂತೆ ವಾಹನವನ್ನೂ ಸಹ ಒದಗಿಸಿದೆ. ನೂತನ ತಾಲೂಕುಗಳು ಸೇರಿದಂತೆ ಜಿಲ್ಲೆಯಲ್ಲಿ 13 ತಾಲೂಕುಗಳಿದ್ದು ಮತ್ತು ತಾಲೂಕಿನಲ್ಲಿ ಹೆಚ್ಚು ಕುರಿಗಳಿರುವುದರಿಂದ ಒಂದು ಹೆಚ್ಚಿನ ವಾಹನ ಸೇರಿದಂತೆ ಒಟ್ಟು 290 ಪಶು ಸಂಜೀವಿನಿ ಆ್ಯಂಬುಲೆನ್ಸ್‌ ವಾಹನಗಳನ್ನು ಮಂಜೂರು ಮಾಡಲಾಗಿದೆ. ಆದರೆ, ಅವುಗಳಿನ್ನೂ ರೈತರ ಮನೆ ಬಾಗಿಲಿಗೆ ಹೋಗದೆ ನಿಂತಲ್ಲೇ ನಿಂತಿವೆ. ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಕಚೇರಿ ಆವರಣದಲ್ಲಿ ಮಳೆ ಗಾಳಿ ಬಿಸಿಲಿನ ಜೊತೆಗೆ ಧೂಳು ತಿನ್ನುತ್ತಿವೆ.

ಕಳೆದ ಒಂದೂವರೆ ತಿಂಗಳ ಹಿಂದೆಯೇ ಜಿಲ್ಲೆಗೆ ಸಂಚಾರಿ ಪಶು ಚಿಕಿತ್ಸಾ ವಾಹನಗಳು ಬಂದಿದ್ದರೂ ಇನ್ನೂ ರೈತರ ಮನೆ ಬಾಗಿಲಿಗೆ ಹೋಗದಿರುವುದು ವಿಪರ್ಯಾಸ ಪಶು ಆ್ಯಂಬುಲೆನ್ಸ್‌ ವಾಹನಗಳು1962 ಉಚಿತ ಟೋಲ್ ಫ್ರೀ ನಂಬರ್​ಗೆ ರೈತರು ಕರೆ ಮಾಡಿದರೆ ತಮ್ಮ ಜಾನುವಾರುಗಳಿಗೆ ಚಿಕಿತ್ಸೆ ನೀಡಲು ಮನೆ ಬಾಗಿಲಿಗೆ ಪಶು ವೈದ್ಯರ ಸಮೇತ ಬರುತ್ತೆ ಎಂದು ಸರ್ಕಾರ ಹೇಳಿದೆ.

ಆದರೆ, ಜಿಲ್ಲೆಗೆ ಬಂದಿರುವ ವಾಹನಗಳ ನೋಂದಣಿ ಮಾಡಿಸೋದು ಈ ವಿಳಂಬಕ್ಕೆ ಕಾರಣ ಎನ್ನಲಾಗುತ್ತಿದೆ ಜೊತೆಗೆ, ವಾಹನಗಳ ಉಸ್ತುವಾರಿ ಟೆಂಡರ್ ಕರೆಯದೆ ಯೋಜನೆ ಜಾರಿ ಮಾಡಲಾಗಿದೆಯಂತೆ. ಹೀಗಾಗಿ ವಾಹನಗಳ ನಿರ್ವಹಣೆ ಯಾರು ಮಾಡಬೇಕು ಅನ್ನೋ ಗೊಂದಲದಿಂದಾಗಿ ಈ ಸಮಸ್ಯೆ ಉಂಟಾಗಿದೆ. ವಾಹನ ನಿರ್ವಹಣೆ ಟೆಂಡರ್ ಪೂರ್ಣವಾದ ಬಳಿಕ ವಾಹನ ಹಸ್ತಾಂತರ ಮಾಡಲಾಗುವುದು ಎಂದು ಪಶುಸಂಗೋಪನಾ ಇಲಾಖೆಯ ವರದಿ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು