News Karnataka Kannada
Monday, May 20 2024
ಮಂಗಳೂರು

ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿದ ಪೇಜಾವರ ಶ್ರೀ

Pejawar Sri visits Marigudi temple and inspects restoration work
Photo Credit : News Kannada

ಕಾಪು: ಪೇಜಾವರ ಮಠದ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಶುಕ್ರವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಳಕ್ಕೆ ಭೇಟಿ ನೀಡಿ ಮಾರಿಯಮ್ಮನ ದರುಶನ ಪಡೆದು ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ಮಕ್ಕಳು ಅಮ್ಮನ ಸೇವೆಯನ್ನು ಹೇಗೆ ಮಾಡಬೇಕು ಎಂಬುದನ್ನು ನಾವು ಕಾಪುವಿನ ಅಮ್ಮನ ಮಕ್ಕಳನ್ನು ಕಂಡು ಅರಿತುಕೊಳ್ಳಬೇಕು “ಇದಂ ಪ್ರಥಮತಃ” ಎಂಬಂತೆ ಈ ಪರಿಯ ನೂತನವಾದ ಮಂದಿರವನ್ನು ನಾವೆಲ್ಲೂ ಕೂಡಾ ಕಂಡಿಲ್ಲ, ತಾಯಿಯ ಭಕ್ತರೂ ದೇಶ ವಿದೇಶಗಳಿಂದ ಈ ಪುಣ್ಯ ಕಾರ್ಯಕ್ಕೆ ಕೈ ಜೋಡಿಸುತ್ತಿರುವುದು ವಿಶೇಷವಾಗಿದೆ. ನಿಗದಿತ ಸಮಯದಲ್ಲಿ ಎಲ್ಲಾ ಕಾರ್ಯಗಳು ಮುಗಿಯಲಿ ಮತ್ತು ಭಕ್ತರ ಕಷ್ಟಕಾರ್ಪಣ್ಯಗಳು ದೂರವಾಗಿ ಮನೋಭಿಲಾಷೆ ಫಲಿಸಲಿ ಎಂದು ಆಶಿಸುತ್ತೇವೆ.

ಅಭಿವೃದ್ಧಿ ಸಮಿತಿಯಲ್ಲಿ ಇನ್ನೂ ಅನೇಕ ಕಾರ್ಯಗಳು ನಡೆಯಲಿಕ್ಕಿವೆ ಬಹುದೊಡ್ಡ ಕನಸನ್ನು ನೀವೆಲ್ಲ ಹೊತ್ತಿದ್ದೀರಿ, ನಾಡಿನ ಮೂಲೆ ಮೂಲೆಯಿಂದ ತಾಯಿಯ ದೇವಳ ನಿರ್ಮಾಣಕ್ಕೆ ಸೇವೆಗಳು ಹರಿದು ಬರಲಿ. ಎಲ್ಲರಿಗೂ ತಾಯಿಯ ಆಶೀರ್ವಾದವಿರಲಿ ಎಂದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆ.ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರು ಮತ್ತು ಕಾಪು ಕ್ಷೇತ್ರದ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು