Categories: ಮಂಗಳೂರು

ಮಂಗಳೂರು: ಪಿಹೆಚ್ ಡಿ ವಿದ್ಯಾರ್ಥಿನಿ ಇದ್ದಕ್ಕಿದ್ದಂತೆ ನಾಪತ್ತೆ

ಮಂಗಳೂರು: ಪಿಹೆಚ್ ಡಿ ವಿದ್ಯಾರ್ಥಿನಿಯೋರ್ವಳು ಏಕಾಏಕಿ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು ಹೊರವಲಯದ ದೇರಳಕಟ್ಟೆಯ ಖಾಸಗಿ ಕಾಲೇಜಿನಲ್ಲಿ ಪಿಹೆಚ್ ಡಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿ 27 ವರ್ಷದ ಚೈತ್ರಾ ನಾಪತ್ತೆಯಾದವರು.

ಇವರು ಪಿಜಿಯಲ್ಲಿದ್ದು ಓದುತ್ತಿದ್ದರು. ತಂದೆಯನ್ನು ಕಳೆದುಕೊಂಡಿದ್ದ ಚೈತ್ರಾ ದೊಡ್ಡಪ್ಪನ ಆಶ್ರಯದಲ್ಲಿದ್ದರು. ದೇರಳಕಟ್ಟೆಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಂಎಸ್ ಸಿ ಮುಗಿಸಿದ ಬಳಿಕ ಕೋಟೆಕಾರು ಬಳಿಯ ಖಾಸಗಿ ಪಿಜಿಯಲ್ಲಿದ್ದುಕೊಂಡು ಫುಡ್ ಸೆಕ್ಯುರಿಟಿ ವಿಷಯದ ಮೇಲೆ ಪಿಹೆಚ್ ಡಿ ಅಧ್ಯಯನ ನಡೆಸಿದ್ದರು.

ಫೆ.17ರಂದು ಎಂದಿನಂತೆ ತನ್ನ ಸ್ಕೂಟರ್ ನಲ್ಲಿ ತೆರಳಿರುವ ಚೈತ್ರಾ ವಾಪಾಸ್ ಆಗಿಲ್ಲ. ಚೈತ್ರಾ ನಾಪತ್ತೆಯಾಗಿರುವ ಬಗ್ಗೆ ಆಕೆಯ ದೊಡ್ಡಪ್ಪ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Ashitha S

Recent Posts

ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಶುಶ್ರೂಷಕರ ದಿನಾಚರಣೆ

ಇಲ್ಲಿನ ಬ್ರಿಮ್ಸ್ ಆವರಣದಲ್ಲಿರುವ ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ಸೋಮವಾರ ವಿಶ್ವ ಶುಶ್ರೂಷಕರ ದಿನ ಆಚರಿಸಲಾಯಿತು.

3 hours ago

ಮುಂಬೈನಲ್ಲಿ ಹೋರ್ಡಿಂಗ್ ಬಿದ್ದು ಮೂವರು ಸಾವು: 59 ಜನರಿಗೆ ಗಾಯ

ಮುಂಬೈನಲ್ಲಿ ಈ ವರ್ಷದ ಮೊದಲ ಮಳೆಗೆ ಅನಾಹುತ ಸಂಭವಿಸಿದೆ. ಇಂದು ಸಂಜೆ 4.30ರ ಸುಮಾರಿಗೆ ಹೋರ್ಡಿಂಗ್ ಕುಸಿದಿದ್ದರಿಂದ ಸುಮಾರು 100…

3 hours ago

ಸಚಿವ ಹೆಚ್‌.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

3 hours ago

ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

ಇ- ಲಾಸ್ಟ್ ಮತ್ತು ಸಿಇಐಆರ್- ಫೋರ್ಟಲ್ ಮೂಲಕ ಕಳೆದು ಹೋಗಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ 52 ಮೊಬೈಲ್‌ಗಳನ್ನು…

4 hours ago

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಅಂಬಿಕಾ ವಿದ್ಯಾಲಯದ ಸಾಧನೆ: ನೂರು ಶೇಕಡಾ ಫಲಿತಾಂಶ

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು 2023 – 24ನೇ ಸಾಲಿನ…

4 hours ago

ನಾಡ ಜನರ ಬದುಕು ನಂದಾದೀಪವಾಗಲು ನಂದಿ ಬಸವೇಶ್ವರ ತೊಟ್ಟಿಲು ತೂಗಿದ ಗಡಿನಾಡ ನಾರಿಯರು

ಕರ್ನಾಟಕದ ಕಟ್ಟಕಡೆಯ ಗ್ರಾಮವಾದ ಗಡಿನಾಡ ಗ್ರಾಮ ಬಳೂರ್ಗಿ ಗ್ರಾಮ ದೇವ ನಂದಿ ಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.…

5 hours ago