News Karnataka Kannada
Saturday, May 04 2024
ಮಂಗಳೂರು

ಪೊಳಲಿ: ಆಳುಪ ದೊರೆ ಎರಡನೆಯ ಬಂಕಿದೇವನ‌ ಶಾಸನ ಅಧ್ಯಯನ

Shasna
Photo Credit :

ಬಂಟ್ವಾಳ : ಇಲ್ಲಿನ ಕರಿಯಂಗಳ ಗ್ರಾಮದ ಕಲ್ಕುಟದ ದಾಮೋದರ ಸಪಲಿಗ‌ ಇವರ ಗದ್ದೆಯಲ್ಲಿರುವ ಶಾಸನವನ್ನು ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನ‌ ಇತಿಹಾಸ ಮತ್ತು ಪುರಾತತ್ವ ಉಪನ್ಯಾಸಕರಾದ ಶ್ರುತೇಶ್ ಆಚಾರ್ಯ‌‌‌ ಮೂಡುಬೆಳ್ಳೆ ಮತ್ತು ತೃತೀಯ ಬಿ.ಎ ವಿದ್ಯಾರ್ಥಿಯಾದ ವಿಶಾಲ್ ರೈ.‌ ಕೆ ಅವರು ‌ಅಧ್ಯಯನಕ್ಕೆ ಒಳಪಡಿಸಿರುತ್ತಾರೆ.

ಕಣ (ಗ್ರಾನೈಟ್) ಶಿಲೆಯಲ್ಲಿ ಕೊರೆಯಲ್ಪಟ್ಟ ಈ ಶಾಸನವು ಸುಮಾರು 3 ಅಡಿ ಎತ್ತರ, 2 ಅಡಿ ಅಗಲವನ್ನು‌ ಹೊಂದಿದೆ.‌ 13 ನೆಯ ಶತಮಾನದ ಕನ್ನಡ ಲಿಪಿ ‌ಮತ್ತು ಭಾಷೆಯಲ್ಲಿರುವ ಈ ಶಾಸನವು ಒಟ್ಟು 15 ಸಾಲುಗಳನ್ನು ಒಳಗೊಂಡಿದ್ದು, ಮುಂಭಾಗದಲ್ಲಿ 12 ಸಾಲು ಮತ್ತು ಶಾಸನದ ಎಡ ಬದಿಯಲ್ಲಿ 3 ಸಾಲುಗಳನ್ನು ನೋಡಬಹುದು.

ಸ್ವಸ್ತಿ ಶ್ರೀಮತು ಎಂದು ಆರಂಭಗೊಳ್ಳುವ ಈ ಶಾಸನವು ಕ್ರೋಧಿ ಸಂವತ್ಸರದ ಸಿಂಹಮಾಸ ಮೊದಲಾಗಿ 5ನೆಯ ಆ ಎಂದಿದ್ದು ಈ ಕಾಲಮಾನವು ಆಳುಪ ದೊರೆ 2ನೆಯ ಬಂಕಿದೇವನ (ಸಾ.ಶ.ವ. 1258-1315‌) ಆಳ್ವಿಕೆಯ ಕಾಲಕ್ಕೆ ಸರಿ ಹೊಂದುತ್ತದೆ. ಈ ಕಾಲಘಟ್ಟದಲ್ಲಿ ಆಳುಪ ದೊರೆ ಎರಡನೆಯ ಬಂಕಿದೇವನು ಮಂಗಳೂರು ರಾಜ್ಯವನ್ನು ಆಳ್ವಿಕೆ ಮಾಡುತ್ತಿದ್ದಾಗ ಬೊಮಣತಿಕಾರಿಯು ಪೊಳಲ (ಪ್ರಸ್ತುತ ಪೊಳಲಿ) ದೇವಾಲ್ಯದಲ್ಲಿ ಕಲ್ವುಟ (ಪ್ರಸ್ತುತ ಕಲ್ಕುಟ) ದ ಭೂಮಿಯಿಂದ ಪೊಳಲ ದೇವರಿಗೆ ಬಿಟ್ಟ ಗೇಣಿಯ ವಿವರವನ್ನು ಶಾಸನವು‌ ಉಲ್ಲೇಖಿಸುತ್ತದೆ. ಶಾಸನವು ಕೊನೆಯಲ್ಲಿ ಶಾಪಾಶಯ ವಾಕ್ಯದೊಂದಿಗೆ‌ ಕೊನೆಗೊಳ್ಳುತ್ತದೆ.

ಈ ಕ್ಷೇತ್ರಕಾರ್ಯ ಶೋಧನೆಯಲ್ಲಿ ಕದ್ರಿ ಶ್ರೀ ಮಂಜುನಾಥ ದೇವಾಲಯದ ಮುಖ್ಯ ಗುಮಾಸ್ತ ಅರುಣ್ ಕುಮಾರ್, ವಿಜಿತಾ ಅಮೀನ್ ಮತ್ತು ಸ್ಥಳೀಯರಾದ ರೋಹಿತಾಕ್ಷ, ಸೂರಜ್ ಅವರು ಸಹಕಾರ ನೀಡಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು