News Karnataka Kannada
Tuesday, May 07 2024
ಮಂಗಳೂರು

ತುಳು ಭಾಷೆಯನ್ನು 8ನೇ ಪರಿಚ್ಛೇಧದಲ್ಲಿ ಸೇರಿಸಲಾಗದೆ ಬಂಡಲ್ ಬಿಟ್ಟ ರಾಜಕಾರಣಿಗಳು: ಕೇಮಾರು ಶ್ರೀ ಖೇದ

Kemaru Sri Kheda was speaking after launching an app called 'Telebaravu'
Photo Credit : News Kannada

ಮಂಗಳೂರು: ತುಳುನಾಡಿನ ಜನರಿಗೆ ಜಾತಿಗಿಂತ ತುಳು ಸಂಸ್ಕೃತಿ ಮುಖ್ಯ, ದೇಶ ವಿದೇಶಕ್ಕೂ ಹೋದರೂ ತುಳು ಸಂಸ್ಕೃತಿಯನ್ನು ಮರೆಯಬಾರದು. ಆದರೆ ತುಳು ಭಾಷೆಯನ್ನು ಎಂಟನೇ ಪರೀಚ್ಛೇಧದಲ್ಲಿ ಸೇರಿಸುವಲ್ಲಿ ಈತನಕವೂ ಆಗದೇ ರಾಜಕಾರಣಿಗಳು ಕೇವಲ ಬಂಡಲ್ ಬಿಡುವಲ್ಲೇ ಕಾಲ ಕಳೆದರು ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ ಖೇದ ವ್ಯಕ್ತಪಡಿಸಿದರು.

ಜೈ ತುಲುನಾಡ್(ರಿ) ಇದರ ನೇತೃತ್ವದಲ್ಲಿ ಶ್ರೀಕ್ಷೇತ್ರ ಕೇಮಾರಿನಲ್ಲಿ ಭಾನುವಾರ ‘ಟೆಲಿಬರವು’ ಎಂಬ ಆಪ್ ಲೋಕಾರ್ಪಣೆಗೊಳಿಸಿ ಅವರು ಆಶೀರ್ವಚನ ನೀಡಿ ಮಾತನಾಡಿದರು.

ಈ ವೇಳೆ ‘ಟೆಲಿಬರವು’ ತಂತ್ರಾಂಶದ ರಚನೆಕಾರರಾದ ಜ್ಙಾನೇಶ ದೇರಳಕಟ್ಟೆ ಇವರನ್ನು ಸನ್ಮಾನಿಸಲಾಯಿತು. ಈ ತಂತ್ರಾಂಶದಲ್ಲಿ ಕನ್ನಡದಲ್ಲಿ ಬರೆದಂತಹ ಅಕ್ಷರಗಳು ತುಳು ಲಿಪಿಗೆ ಪರಿವರ್ತನೆಯಾಗುತ್ತದೆ ಎಂದು ಸನ್ಮಾನಿತರಾದ ಜ್ಞಾನೇಶ್ ಹೇಳಿದರು.
ಜೈ ತುಲುನಾಡು ಸಂಘಟನೆಯ ಅಧ್ಯಕ್ಷ ವಿಶು ಶ್ರೀಕೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐಕಳ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷ ರಾಜೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜೈ ತುಲುನಾಡು ಸಂಘಟನೆಯ ಉಪಾಧ್ಯಕ್ಷ ಉದಯ್ ಪೂಂಜಾ ಉಪಸ್ಥಿತರಿದ್ದರು. ಕಿರಣ್ ತುಲುವೆ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು