News Karnataka Kannada
Saturday, April 27 2024
ಮಂಗಳೂರು

ಸಿ.ಎ. ಪವರ್ 25- ಸಿ.ಎ ಇಂಟರ್- ಗ್ರೂಪ್1, ಸೀಸನ್ -4″ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Ca
Photo Credit : News Kannada

ಮಂಗಳೂರು: ನಗರದಲ್ಲಿ ಫೆ.24 ರಂದು ” ಸಿ.ಎ. ಪವರ್ 25- ಸಿ.ಎ ಇಂಟರ್- ಗ್ರೂಪ್1, ಸೀಸನ್ -4″ ತರಬೇತಿ ಶಿಬಿರದ ಸಮಾರೋಪ ಸಮಾರಂಭ ವಿಶ್ವ ಕೊಂಕಣಿ ಕೇಂದ್ರದಲ್ಲಿ ಜರುಗಿತು.

ಕೇಂದ್ರದ ಅಧ್ಯಕ್ಷರಾದ ಸಿ.ಎ. ನಂದಗೋಪಾಲ ಶೆಣೈಯವರು ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ಸಾಕಾರಗೊಳಿಸಲು ಧೃಢ ನಿರ್ಧಾರ ಹಾಗೂ ಸಮರ್ಪಣಾ ಭಾವನೆಯಿಂದ ಮಾತ್ರ ಸಾಧ್ಯ. ಶಿಬಿರದ ಸದುಪಯೋಗ ಪಡೆದು ಆತ್ಮವಿಶ್ವಾಸದಿಂದ ತಮ್ಮ ಗುರಿಸಾಧಿಸಬೇಕು ಎಂದು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ತ್ರಿಶಾ ಕ್ಲಾಸಸ್ ನ ಉಪನ್ಯಾಸಕ ಸಿ.ಎ. ನಾಗೇಂದ್ರ ಭಕ್ತಾ ಇವರು ಸಿ.ಎ. ಪರೀಕ್ಷೆಗಳನ್ನು ಎದುರಿಸಲು ಪರೀಕ್ಷಾರ್ಥಿಗಳಿಗೆ ಅವಶ್ಯಕವಾಗಿರುವ ಮನೋ ಸಾಮರ್ಥ್ಯಗಳ ವಿವರ ನೀಡಿದರು.ಡಾ. ಬಿ. ದೇವದಾಸ್ ಪೈ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಬೇಕಾದ ಬಗ್ಗೆ ಉಪಯುಕ್ತ ಸಲಹೆ ನೀಡಿದರು.

ಹತ್ತು ದಿನಗಳ ಅವಧಿಯ ಈ ಉಚಿತ ಸನಿವಾಸೀ ತರಬೇತಿಯಲ್ಲಿ ಪರೀಕ್ಷಾರ್ಥಿಗಳಿಗೆ ಆಧುನಿಕ ಮಾದರಿಯಲ್ಲಿ ಸಂಪೂರ್ಣ ಪುನರಾವರ್ತನೆ ಹಾಗೂ ಅಣಕ ಪರೀಕ್ಷೆ ನೀಡಿ ಅಂತಿಮ ಮಟ್ಟಕ್ಕೆ ಸಿದ್ಧಗೊಳಿಸಿದೆ. ಈ ಕಾರಣದಿಂದಾಗಿ ಕಳೆದ ಮೂರು ಬ್ಯಾಚ್ ನಲ್ಲಿ ಸಾಕಷ್ಟು ಸಂಖ್ಯೆಯ ವಿದ್ಯಾರ್ಥಿಗಳು ಉತ್ತೀರ್ಣ ಗೊಂಡಿರುತ್ತಾರೆ.

ಸಿ.ಎ. ಉಲ್ಲಾಸ್ ಕಾಮತ್ ರವರ ಯು.ಕೆ. ಆಂಡ್ ಕೊ ಮತ್ತು ತ್ರಿಶಾ ಕ್ಲಾಸಸ್ ಸಂಸ್ಥೆಗಳು ವಿಶ್ವ ಕೊಂಕಣಿ ಕೇಂದ್ರದೊಂದಿಗೆ ಈ ತರಬೇತಿ ಯೋಜನೆಯ ಸಹಭಾಗಿಗಳಾಗಿರುತ್ತಾರೆ.

ಶಿಬಿರಾರ್ಥಿಗಳು ಉತ್ಸಾಹದಿಂದ ಶಿಬಿರದಲ್ಲಿ ತಾವು ಪಡೆದ ಅನುಭವಗಳನ್ನು ಹಂಚಿಕೊಂಡರು. ವಿದ್ಯಾರ್ಥಿ ಯಶಸ್ವಿ ಸ್ವಾಗತಿಸಿದರು, ದೀಪ್ನಾ ಜೆ ಕಾರ್ಯಕ್ರಮ ನಿರ್ವಹಿಸಿ, ವೈಷ್ಣವಿ ಧನ್ಯವಾದ ಸಮರ್ಪಣೆ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು