ಮಂಗಳೂರು: ನಗರದಲ್ಲಿ ಫೆ.24 ರಂದು ” ಸಿ.ಎ. ಪವರ್ 25- ಸಿ.ಎ ಇಂಟರ್- ಗ್ರೂಪ್1, ಸೀಸನ್ -4″ ತರಬೇತಿ ಶಿಬಿರದ ಸಮಾರೋಪ ಸಮಾರಂಭ ವಿಶ್ವ ಕೊಂಕಣಿ ಕೇಂದ್ರದಲ್ಲಿ ಜರುಗಿತು.
ಕೇಂದ್ರದ ಅಧ್ಯಕ್ಷರಾದ ಸಿ.ಎ. ನಂದಗೋಪಾಲ ಶೆಣೈಯವರು ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ಸಾಕಾರಗೊಳಿಸಲು ಧೃಢ ನಿರ್ಧಾರ ಹಾಗೂ ಸಮರ್ಪಣಾ ಭಾವನೆಯಿಂದ ಮಾತ್ರ ಸಾಧ್ಯ. ಶಿಬಿರದ ಸದುಪಯೋಗ ಪಡೆದು ಆತ್ಮವಿಶ್ವಾಸದಿಂದ ತಮ್ಮ ಗುರಿಸಾಧಿಸಬೇಕು ಎಂದು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ತ್ರಿಶಾ ಕ್ಲಾಸಸ್ ನ ಉಪನ್ಯಾಸಕ ಸಿ.ಎ. ನಾಗೇಂದ್ರ ಭಕ್ತಾ ಇವರು ಸಿ.ಎ. ಪರೀಕ್ಷೆಗಳನ್ನು ಎದುರಿಸಲು ಪರೀಕ್ಷಾರ್ಥಿಗಳಿಗೆ ಅವಶ್ಯಕವಾಗಿರುವ ಮನೋ ಸಾಮರ್ಥ್ಯಗಳ ವಿವರ ನೀಡಿದರು.ಡಾ. ಬಿ. ದೇವದಾಸ್ ಪೈ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಬೇಕಾದ ಬಗ್ಗೆ ಉಪಯುಕ್ತ ಸಲಹೆ ನೀಡಿದರು.
ಹತ್ತು ದಿನಗಳ ಅವಧಿಯ ಈ ಉಚಿತ ಸನಿವಾಸೀ ತರಬೇತಿಯಲ್ಲಿ ಪರೀಕ್ಷಾರ್ಥಿಗಳಿಗೆ ಆಧುನಿಕ ಮಾದರಿಯಲ್ಲಿ ಸಂಪೂರ್ಣ ಪುನರಾವರ್ತನೆ ಹಾಗೂ ಅಣಕ ಪರೀಕ್ಷೆ ನೀಡಿ ಅಂತಿಮ ಮಟ್ಟಕ್ಕೆ ಸಿದ್ಧಗೊಳಿಸಿದೆ. ಈ ಕಾರಣದಿಂದಾಗಿ ಕಳೆದ ಮೂರು ಬ್ಯಾಚ್ ನಲ್ಲಿ ಸಾಕಷ್ಟು ಸಂಖ್ಯೆಯ ವಿದ್ಯಾರ್ಥಿಗಳು ಉತ್ತೀರ್ಣ ಗೊಂಡಿರುತ್ತಾರೆ.
ಸಿ.ಎ. ಉಲ್ಲಾಸ್ ಕಾಮತ್ ರವರ ಯು.ಕೆ. ಆಂಡ್ ಕೊ ಮತ್ತು ತ್ರಿಶಾ ಕ್ಲಾಸಸ್ ಸಂಸ್ಥೆಗಳು ವಿಶ್ವ ಕೊಂಕಣಿ ಕೇಂದ್ರದೊಂದಿಗೆ ಈ ತರಬೇತಿ ಯೋಜನೆಯ ಸಹಭಾಗಿಗಳಾಗಿರುತ್ತಾರೆ.
ಶಿಬಿರಾರ್ಥಿಗಳು ಉತ್ಸಾಹದಿಂದ ಶಿಬಿರದಲ್ಲಿ ತಾವು ಪಡೆದ ಅನುಭವಗಳನ್ನು ಹಂಚಿಕೊಂಡರು. ವಿದ್ಯಾರ್ಥಿ ಯಶಸ್ವಿ ಸ್ವಾಗತಿಸಿದರು, ದೀಪ್ನಾ ಜೆ ಕಾರ್ಯಕ್ರಮ ನಿರ್ವಹಿಸಿ, ವೈಷ್ಣವಿ ಧನ್ಯವಾದ ಸಮರ್ಪಣೆ ಮಾಡಿದರು.
ರಾತ್ರಿ ಸುರಿದ ಭಾರೀ ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಸವಾರ ಸಾವನ್ನಪ್ಪಿರುವ ಘಟನೆ ಕೋಲಾರ…
ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇ ಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ.
ವಿಶ್ವ ರೆಡ್ ಕ್ರಾಸ್ ದಿನವನ್ನು ವಿಶ್ವದಾದ್ಯಂತ ಮೇ 8ರಂದು ಆಚರಿಸಲಾಗುತ್ತದೆ. ಸ್ವಿಸ್ ಉದ್ಯಮಿ ಮತ್ತು ವಿಶ್ವದ ಅತಿದೊಡ್ಡ ಮಾನವೀಯ ನೆರವು…
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರದಲ್ಲಿ ಬುಧವಾರ ಡಿಸಿಎಂ ಡಿ.ಕೆಶಿವಕುಮಾರ್ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ರಾಮನಗರದ ಐಜೂರು…
ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಹಸೆಮಣೆ ಏರಲು ರೆಡಿಯಾಗಿದ್ದಾರೆ. ತಮಿಳಿನ ಖ್ಯಾತ ನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ…
ಇಲ್ಲಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.