ಮಂಗಳೂರು: ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ ಮಾಡಿದ್ದ ಶಾಸಕ ಹರೀಶ್ ಪೂಂಜಾ ವಿರುದ್ಧ ಇಂದು ಮತ್ತೊಂದು ದೂರು ದಾಖಲಾಗಿದೆ. ಮಂಗಳೂರು ಐಜಿಗೆ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ದೂರು ನೀಡಿದ್ದಾರೆ.
ದೂರು ನೀಡಿದ ಬಳಿಕ ಹೇಳಿಕೆ ನೀಡಿರುವ ಅವರು ಹರೀಶ್ ಪೂಂಜ ಹೇಳಿಕೆಯನ್ನು ಖಂಡಿಸುತ್ತೇವೆ. ಬಿಜೆಪಿ ಶಾಸಕರು ಯಾರನ್ನು ಬೇಕಾದರೂ ಹುಟ್ಟಿಸುತ್ತಾರೆ. ಯಾರನ್ನ ಬೇಕಾದರೂ ಸಾಯಿಸುತ್ತಾರೆ.
ಅವರಿಗೆ ಇದು ರೂಢಿಯಾಗಿ ಹೋಗಿದೆ. ಈ ಹಿಂದೆ ಉರಿ ಗೌಡ ಹಾಗೂ ನಂಜೇಗೌಡರನ್ನ ಹುಟ್ಟಿಸಿದ್ರು. ಇವರ ಮಾತು ಮತ್ತು ಮೆದುಳಿಗಿರುವ ವೈರ್ ನ್ನು ಅವರು ಕನೆಕ್ಟ್ ಮಾಡುವುದು ಒಳ್ಳೆಯದು.
ಈ ಹಿಂದೆ ಇದೇ ಪೂಂಜ ಓರ್ವ ಮಹಿಳೆಗೆ ಮೊಟ್ಟೆ ಎಸೆದು ಅವಮಾನ ಮಾಡಿದ್ದರು. ಇಂತಹ ಶಾಸಕರು ಜಿಲ್ಲೆಯಾದ್ಯಂತ ದ್ವೇಷ ರಾಜಕಾರಣ ಮಾಡುತ್ತಾ ಬಂದಿದ್ದಾರೆ. ಒಂದು ಕಡೆ ಮುಸಲ್ಮಾನರ ವೋಟ್ ಬೇಡ ಎಂದು ಹೇಳುವ ಪೂಂಜ ತಮ್ಮ ಗ್ಯಾಸ್ ಏಜೆನ್ಸಿಯನ್ನು ಮುಸಲ್ಮಾನ್ ವ್ಯಕ್ತಿಗೆ ಮಾರಿದ್ದರು. ವೋಟ್ ಬೇಡ ಎಂದು ಮಸೀದಿಗಳಿಗೆ ಅತೀ ಹೆಚ್ಚಿನ ಅನುದಾನ ನೀಡುತ್ತಾರೆ.
ಇಂತಹ ಶಾಸಕರನ್ನು ಏನು ಮಾಡಬೇಕು ಎಂದು ಜನತೆ ಅರ್ಥ ಮಾಡಿಕೊಳ್ಳಬೇಕು ಎಂದು ಪ್ರತಿಭಾ ಕುಳಾಯಿ ಹೇಳಿಕೆ ನೀಡಿದ್ದಾರೆ
ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್ಜೈಂಟ್ಸ್ ತಂಡವನ್ನು ಆತಿಥೇಯ ಸನ್ರೈಸರ್ಸ್ ಹೈದರಾಬಾದ್ ತಂಡ…
ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…
ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…