News Karnataka Kannada
Friday, May 17 2024
ಮಂಗಳೂರು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್​ ಎನ್ಐಎ ಸ್ವಾಧೀನಕ್ಕೆ

Another warning message to Praveen Nettar's killers
Photo Credit : Twitter

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್​ ಅನ್ನು ಸ್ವಾಧೀನ ಪಡಿಸಿಕೊಂಡಿದೆ.

ತನಿಖೆ ವೇಳೆ ಫ್ರೀಡಂ ಕಮ್ಯೂನಿಟಿ ಹಾಲ್‌ನಲ್ಲಿ ಪಾಪ್ಯುಲರ್ ಫ್ರಂಟ್‌ ಅಫ್ ಇಂಡಿಯಾದ ಸದಸ್ಯರಿಗೆ ಅನಧಿಕೃತವಾಗಿ ಭಯೋತ್ಪಾದನೆಗೆ ಸಹಕಾರಿಯಾಗುವಂತಹ ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲಾಗುತ್ತಿತ್ತು ಎಂಬ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್​ಐಎ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಕಮ್ಯುನಿಟಿ ಹಾಲ್ ಇರುವ 20 ಗುಂಟೆ ಜಾಗವನ್ನು ಎನ್ಐಎ ಸಂಪೂರ್ಣ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಈ ವಿಚಾರವಾಗಿ ಆದೇಶದ ಪ್ರತಿಯನ್ನು ಹಾಲ್ ಮಾಲೀಕರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗೆ ಕಳುಹಿಸಲಾಗಿದೆ ಎಂದು ಎನ್​ಐಎ ಅಧಿಕೃತ ಮೂಲಗಳು ತಿಳಿಸಿವೆ. ಈ ಭೂಮಿ, ಕಟ್ಟಡವನ್ನು ಪರಭಾರೆ ಮಾಡುವುದಾಗಲಿ, ಬಾಡಿಗೆಗೆ ನೀಡುವುದಾಗಲಿ, ಯಾವುದೇ ಬದಲಾವಣೆ ಮಾಡುವುದಾಗಲಿ, ಬಳಸಿಕೊಳ್ಳುವುದಾಗಲೀ ಮಾಡುವುದನ್ನು ಸಂಪೂರ್ಣವಾಗಿ ಎನ್‌ಐಎ ನಿಷೇಧಿಸಿ, ವಶಕ್ಕೆ ಪಡೆದಿರುವ ಕುರಿತು ಆದೇಶ ಜಾರಿಗೊಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು