News Karnataka Kannada
Saturday, April 27 2024
ಮಂಗಳೂರು

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳ ಬಂಧನ

Puttur: BJP youth leader Praveen Nettaru hacked to death
Photo Credit : News Kannada

 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಸುಳ್ಯ ತಾಲೂಕಿನ ನಾವೂರು ಬಳಿಯ ನಿವಾಸಿ ಆಬಿದ್ ( 22 ) ಹಾಗೂ ಬೆಳ್ಳಾರೆ ಗೌರಿ ಹೊಳೆ ನಿವಾಸಿ ನೌಫಲ್ ( 28 ) ಬಂಧಿತರು. ಇವರಿಬ್ಬರ ಬಂಧನದೊಂದಿಗೆ ಬಂಧಿತರ ಸಂಖ್ಯೆ ಆರಕ್ಕೇರಿದೆ.

ಜಿಲ್ಲೆ ಮಾತ್ರವಲ್ಲ ರಾಜ್ಯವನ್ನೇ ಬೆಚ್ವಿ ಬೀಳಿಸಿದ್ದ ಪ್ರವೀಣ್ ಹತ್ಯೆ ಪ್ರಕರಣದಿಂದಾಗಿ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ತಲೆದೋರಿತ್ತು. ಖಚಿತ ಮಾಹಿತಿ ಕಲೆ ಹಾಕಿದ ಪೊಲೀಸರು ಇದೀಗ ಮತ್ತಿಬ್ಬರನ್ನು ಬಂಧಿಸುವುದರೊಂದಿಗೆ ಪ್ರಕರಣ ಹೊಸ ಆಯಾಮ ಪಡೆದುಕೊಂಡಿದೆ. ಬಂಧಿತರ ವಿಚಾರಣೆ ಬಳಿಕ ಮತ್ತಷ್ಟು ವಿಷಯಗಳು ಹೊರಬರಲಿವೆ.

ಪ್ರವೀಣ್ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಎಲ್ಲಾ ಆರೋಪಿಗಳ ಮಾಹಿತಿ ದೊರೆತಿದ್ದು, ತಲೆಮರೆಸಿಕೊಂಡವರಿಗಾಗಿ ಶೋಧ ನಡೆಯುತ್ತಿದೆ.

ಇದುವರೆಗೆ ನಡೆಸಿದ ತನಿಖೆಯ ಆಧಾರದ ಮೇಲೆ ಒಟ್ಟು 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ಬ ಸೋನಾವಣೆ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು