ಮಂಗಳೂರು: ಇಲ್ಲಿನ ಉಳ್ಳಾಲ ಕಡಲಿನಲ್ಲಿ ತಲೆ ಸ್ಪರ್ಶಗೊಂಡು ನಿಂತಿರುವ ಸಿರಿಯದ ಪ್ರಿನ್ಸಸ್ ಮಿರಾಲ್ ಸರಕು ಸಾಗಾಟದ ಹಡಗು ಶೇಕಡಾ ಎಪ್ಪತ್ತರಷ್ಟು ಮುಳುಗಿದ್ದು ಸಮುದ್ರದ ಅಬ್ಬರ ನೋಡಿದರೆ ಹಡಗು ಪೂರ್ಣ ಜಲಸಮಾಧಿಯಾಗುವ ಭೀತಿಯಿದೆ. ಮಲೇಷ್ಯಾದಿಂದ ಲೆಬೆನಾನ್ ಗೆ ಉಕ್ಕಿನ ಕಾಯಿಲ್ಗಳನ್ನು ಸಾಗಿಸುವ ಹಡಗು ತಾಂತ್ರಿಕ ದೋಷ ಹಾಗೂ ಹಡಗಿನಲ್ಲಿ ಮುಂಭಾಗದಲ್ಲಿ ರಂಧ್ರ ಉಂಟಾಗಿ ಅಪಾಯಕ್ಕೆ ಸಿಲುಕಿತ್ತು. ದುರಸ್ತಿಗಾಗಿ ನವಮಂಗಳೂರು ಬಂದರಿನ ಆ್ಯಂಕೊರೇಜ್ ಹಾಗೂ ಮಂಗಳೂರು ಹಳೆ ಬಂದರಿಗೆ ಈ ಹಡಗನ್ನು ತರಲು ಹಡಗಿನ ಏಜೆಂಟರು ಯತ್ನಿಸಿದ್ದರೂ ಅನುಮತಿ ಸಿಕ್ಕಿರಲಿಲ್ಲ ,ಈ ನಡುವೆ ಉಚ್ಚಿಲ ಬಳಿ ಹಡಗು ತಲಾ ಸ್ಪರ್ಶಗೊಂಡು ನಿಂತಿತ್ತು ಅದರಲ್ಲಿದ್ದ ಹದಿನೈದು ಮಂದಿ ಸಿರಿಯನ್ ನಾವಿಕರನ್ನು ಕೋಸ್ಟ್ ಗಾರ್ಡ್ ತಂಡ ರಕ್ಷಣೆ ಮಾಡಿತ್ತು.
ಅಪಾಯಕ್ಕೆ ಸಿಲುಕಿರುವ ಪ್ರಿನ್ಸಸ್ ಮಿರಾಲ್ ಕಾರ್ಗೋ ಹಡಗನ್ನು ದುರಸ್ತಿ ಪಡಿಸುವ ಸಾಧ್ಯತೆ ಬಗ್ಗೆ ಪರಿಶೀಲನೆ ನಡೆಯುತ್ತಿದೆ ,ಈ ನಡುವೆ ಕೋಸ್ಟ್ ಗಾರ್ಡ್ ನಿಂದ ರಕ್ಷಿಸಲ್ಪಟ್ಟ ಅಧಿಕಾರಿ ಹಾಗೂ ಸಿಬ್ಬಂದಿ ಸೇರಿ ಹದಿನೈದು ಮಂದಿ ಸಿರಿಯಾ ದೇಶದ ಪ್ರಜೆಗಳನ್ನು ವಲಸೆ ವಿಭಾಗದ ಅಧಿಕಾರಿಗಳು ಬುಧವಾರ ಪಣಂಬೂರು ಪೊಲೀಸ್ ಠಾಣೆಗೆ ಹಾಜರು ಪಡಿಸಿದ್ದಾರೆ
ಸದ್ಯ ಸಮುದ್ರದಲ್ಲಿ ಮುಳುಗಡೆ ಭೀತಿ ಎದುರಿಸುತ್ತಿರುವ ಪ್ರಿನ್ಸಸ್ ಮಿರಾಲ್ ಕಾರ್ಗೋ ನೌಕೆಯನ್ನು ತೆರವುಗೊಳಿಸುವ ಬಗ್ಗೆ ಹಡಗಿನ ಏಜೆನ್ಸಿ ಚಿಂತನೆ ನಡೆಸುತ್ತಿದೆ . ಹಡಗಿನ ಮಾಲಕರು ಟರ್ಕಿ ಮೂಲದವರಾಗಿದ್ದು ಮಂಗಳೂರಲ್ಲಿ ಅದರ ಪ್ರತಿನಿಧಿ ಮಾರ್ಕನ್ ಶಿಪ್ಪಿಂಗ್ ಏಜೆನ್ಸಿಯ ಪ್ರತಿನಿಧಿ ಮಂಗಳೂರಿನ ಬಂದರು ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ . ಮುಂಬೈಯ ಸ್ಮಿತ್ ಸಾಲ್ವೇಜ್ ಕಂಪೆನಿಯ ತಜ್ಞರು ಮಂಗಳೂರಿಗೆ ಆಗಮಿಸಿ ಹಡಗಿನ ಬಳಿ ತೆರಳಿ ಪರಿಶೀಲನೆ ನಡೆಸಬೇಕಿದೆ ಹಡಗಿನಲ್ಲಿ ಕೋಟ್ಯಂತರ₹ಮೌಲ್ಯದ 8ಸಾವಿರ ಟನ್ ಸ್ಟೀಲ್ ಕಾಯಿಲೆ ಇದ್ದು ಅದನ್ನು ಪಡೆಯುವುದಕ್ಕಾದರೂ ಮಾಲಕರು ತೆರವು ಮಾಡಲು ಮುಂದಾಗಬಹುದು ಎಂದು ಅಂದಾಜಿಸಲಾಗಿದೆ.
ಕೋಸ್ಟ್ ಗಾರ್ಡ್ ನಿಂದ ರಕ್ಷಿಸಲ್ಪಟ್ಟ ಹದಿನೈದು ಮಂದಿ ಸಿರಿಯ ಪ್ರಜೆಗಳನ್ನು ಪಣಂಬೂರು ಪೊಲೀಸರು ಠಾಣೆಗೆ ಹಾಜರು ಪಡಿಸಲಾಗಿದೆ ,ಕೋಸ್ಟ್ ಗಾರ್ಡ್ ಸುಪರ್ದಿಯಲ್ಲಿ ಇವರನ್ನು ಬುಧವಾರ ಇಮಿಗ್ರೇಷನ್ ವಿಭಾಗದ ಅಧಿಕಾರಿಗಳು ಪಣಂಬೂರು ಪೊಲೀಸ್ ಠಾಣೆಗೆ ಹಾಜರುಪಡಿಸಿದರು ಬಳಿಕ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಿದ್ದು ಸಂಸ್ಥೆ ಸಂತ್ರಸ್ತರಿಗೆ ಜಿಲ್ಲಾಡಳಿತ ವಾಸ್ತವ್ಯದ ವ್ಯವಸ್ಥೆ ಮಾಡಲಿದೆ .ಅವರನ್ನು ಬೆಂಗಳೂರಿನಲ್ಲಿರುವ ವಿದೇಶಿ ಪ್ರಜೆಗಳ ತಾತ್ಕಾಲಿಕ ಆಶ್ರಿತ ಕೇಂದ್ರಕ್ಕೆ ಕಳುಹಿಸಲಾಗುವುದು ,ದಿಲ್ಲಿಯ ವಿದೇಶಾಂಗ ವಿಭಾಗದ ಒಪ್ಪಿಗೆ ಬಳಿಕ ಅವರನ್ನು ಸಿರಿಯಾಕ್ಕೆ ಕಲಿಸಲಾಗುತ್ತದೆ ಎಂದು ನಗರ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ .ಬಂದರು ಅಧಿಕಾರಿಗಳು ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪೊಲೀಸರು ಉಳ್ಳಾಲ ಕಡಲ ತೀರದಲ್ಲಿ ಬೀಡು ಬಿಟ್ಟಿದ್ದು ಮುಳುಗಡೆ ಭೀತಿಯಲ್ಲಿರುವ ಹಡಗಿನತ್ತ ಕಣ್ಗಾವಲು ಇರಿಸಿದ್ದಾರೆ.