ಮಂಗಳೂರು: ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮೇ 7 ರ೦ದು ಮ೦ಗಳೂರಿಗೆ ಬರಲಿದ್ದು, ಮೂಲ್ಕಿ ಸಮೀಪದ ಕೊಳ್ನಾಡಿನಲ್ಲಿ ಚುನಾವಣಾ ಪ್ರಚಾರ ಸಭೆಯ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಶುಕ್ರವಾರ ವಿಧಾನಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮೇ 7 ರಂದು ಮಧ್ಯಾಹ್ನ ಒ೦ದು ಗ೦ಟೆಗೆ ಪಕ್ಷಸ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಲಿರುವ ಪ್ರಿಯಾಂಕಾ ಗಾಂಧಿ ಅವರು ಮೂಲ್ಕಿ ಕೊಲ್ನಾಡು ಮೈದಾನದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಭೆಯಲ್ಲಿ ಮ೦ಗಳೂರು ಉತ್ತರ, ಮ೦ಗಳೂರು ದಕ್ಷಿಣ, ಮೂಡುಬಿದಿರೆ ವಿಧಾನಸಭಾ ಕ್ಷೇತ್ರಗಳಿ೦ದ 50 ಸಾವಿರಕ್ಕೂ ಅಧಿಕ ಮ೦ದಿ ಸೇರುವ ನಿರೀಕ್ಷೆ ಇದೆ. ಕರಾವಳಿ ಜಿಲ್ಲೆಗೆ ಇದೇ ಮೊದಲ ಬಾರಿ ಆಗಮಿಸುತ್ತಿದ್ದು ಅವರನ್ನು ಭವ್ಯವಾಗಿ ಸ್ವಾಗತಿಸಲಾಗುತ್ತದೆ ಎಂದರು.
ಕರಾವಳಿಯೂ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಪಡೆದು ಬಹುಮತದ ಸರ್ಕಾರ ರಚನೆ ಮಾಡಲಿದೆ. ಕರಾವಳಿ ಭಾಗಕ್ಕೆ ರೂಪಿಸಿರುವ ಪ್ರತ್ಯೇಕ ಪ್ರಣಾಳಿಕೆ ಹತ್ತು ಅಂಶಗಳನ್ನು 6 ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಕಾಂಗ್ರೆಸ್ ಬದ್ಧ.ಜನಮೆಚ್ಚುವ ಸರ್ಕಾರವನ್ನು ಕಾಂಗ್ರೆಸ್ ನೀಡಲಿದೆ ಎಂದು ತಿಳಿಸಿದರು.
ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರಾ, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಸಿಡಬ್ಲುಸಿ ಸದಸ್ಯ ಡಾ.ಅಜಯ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್, ಸಂತೋಷ ಶೆಟ್ಟಿ ಸೇರಿದಂತೆ ಹಲವರು ಇದ್ದರು.