ಬಂಟ್ವಾಳ ನ.29: ವಿಶ್ರಾಂತ ಪ್ರಾಧ್ಯಾಪಕರು, ಹಿರಿಯ ಪತ್ರಕರ್ತರು, ಅಂಕಣಕಾರರಾಗಿ, ಕವಿ ಸಾಹಿತಿಯಾಗಿರುವ ಪ್ರೋ. ವಿ.ಬಿ.
ಅರ್ತಿಕಜೆಯವರು 2022 ರ ಕನ್ನಡದ ಕಲ್ಹಣ ನೀರ್ಪಾಜೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕನ್ನಡ ಮತ್ತು ಸಂಸ್ಕೃತ ಭಾಷೆಗಳಲ್ಲಿ ವಿದ್ವಾಂಸರಾಗಿದ್ದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮತ್ತು ಪತ್ರಕರ್ತರೂ ಆಗಿದ್ದ ದಿ. ನೀರ್ಪಾಜೆ ಭೀಮ ಭಟ್ಟರ ಹೆಸರಿನಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ದ. 11 ರಂದು ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.
ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರಧಾನ ಮಾಡಲಿರುವರು. ಹಿರಿಯ ವಿದ್ವಾಂಸ ಹಿರಣ್ಯ ವೆಂಕಟೇಶ್ವರ ಭಟ್ ಅಭಿನಂದನಾ ಭಾಷಣ ಮಾಡುವರು. ಸುದರ್ಶನ್ ಪಡಿಯಾರ್ ವಿಟ್ಲ ಸಂಸ್ಮರಣೆ
ನಡೆಸಿಕೊಡಲಿರುವರು. ಜಿ ಸಚಿವ ಬಿ.ರಮಾನಾಥ ರೈಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಸೇಸಪ್ಪ ಕೊಟ್ಯಾನ್ , ಕಲ್ಕೂರ ಪ್ರತಿಷ್ಟಾನ ಮಂಗಳೂರು ಇದರ ಅಧ್ಯಕ್ಷ ಪ್ರದೀಪ್ ಕುಮಾರ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಬಿ.ಎಮ್ ಅಬ್ಬಾಸ್ ಅಲಿ ಉಪಸ್ಥಿತರಿರುವರು.
ಬಿ.ಸಿ.ರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ ನೀರ್ಪಾಜೆ ಭೀಮ ಭಟ್ಟರ ಅಭಿಮಾನಿ ಬಳಗ ಪಾಣೆಮಂಗಳೂರು ಇವರ ವತಿಯಿಂದ ಆಮಂತ್ರಣ ಪ್ರತಿಕೆಯನ್ನು ಹಿರಿಯರಾದ ಎ.ಸಿ.ಭಂಡಾರಿಯವರು ನ. 29 ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ನೀರ್ಪಾಜೆ ಭೀಮ ಭಟ್ಟರ ಅಭಿಮಾನಿ ಬಳಗ ಪಾಣೆಮಂಗಳೂರು ಇದರ ಅಧ್ಯಕ್ಷ ಸುದರ್ಶನ್ ಜೈನ್ , ಉಪಾಧ್ಯಕ್ಷ ಶಿವಶಂಕರ್ ನಂದಾವರ, ಸಂಚಾಲಕ ಕೊಯಿಲ ಮೋಹನ್ ರಾವ್, ಕೈಯೂರು ನಾರಾಯಣ ಭಟ್, ಜಯಾನಂದ ಪೆರಾಜೆ, ಶುಭಾಶ್ಚಂದ್ರ ಜೈನ್ ,ಮಂಜು ವಿಟ್ಲ ಉಪಸ್ಥಿತರಿದ್ದರು.
ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…
ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…
“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…
ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…