News Karnataka Kannada
Tuesday, May 07 2024
ಮಂಗಳೂರು

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರಿಗೆ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಭಟನೆ!

Belth
Photo Credit : By Author

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ಮೇಲೆ ದಾಳಿಗೆ ಯತ್ನಿಸಿದ ದುಷ್ಕರ್ಮಿಗಳು ಸಂಚನ್ನು ರೂಪಿಸಿ ಈ ಕಾರ್ಯ ನಡೆಸಿದ್ದಾರೆ. ಈ ಪೈಶಾಚಿಕ ನಡೆಯನ್ನು ನಡೆಸಿದವರಿಗೆ ಬೆಳ್ತಂಗಡಿ ತಾಲೂಕಿನ 241 ಬೂತ್ ಗಳಿಂದ ಸಾವಿರಾರು ಕಾರ್ಯಕರ್ತರ ಮೂಲಕ ಖಂಡಿಸಿ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಹೇಳಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ರಾತ್ರಿ ಮಂಗಳೂರಿಂದ ಬೆಳ್ತಂಗಡಿಗೆ ಬರುವ ಮಾರ್ಗಮಧ್ಯೆ ಫರಂಗಿಪೇಟೆಯಲ್ಲಿ ದುಷ್ಕರ್ಮಿಗಳು ಸ್ಕಾರ್ಪಿಯೋ ಕಾರಿನಲ್ಲಿ ಹಿಂಬಾಲಿಸಿ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಭಾಜಪಾ ಬೆಳ್ತಂಗಡಿ ಮಂಡಲ ಹಾಗೂ ಎಲ್ಲ ಘಟಕಗಳ ಕಾರ್ಯಕರ್ತರು ಬೆಳ್ತಂಗಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ನಮ್ಮ ಶಾಸಕರಿಗೆ ಯಾವುದೇ ರೀತಿಯಲ್ಲಿ ಸಂಚು ರೂಪಿಸುವ ಹುನ್ನಾರವಿದ್ದರೆ ಬೆಳ್ತಂಗಡಿ ತಾಲೂಕಿನ ಜನತೆ, ಬಿಜೆಪಿ ಕಾರ್ಯಕರ್ತರು ಸಹಿಸುವುದಿಲ್ಲ. ದುಷ್ಕರ್ಮಿಗಳನ್ನು ಶೀಘ್ರವೇ ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಬೇಕು. ಈ ನೆಲೆಯಲ್ಲಿ ಇಂದು ಸಾಂಕೇತಿಕವಾಗಿ ಪ್ರತಿಭಟನೆ ಮಾಡಲಾಗಿದೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದರು.

ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಮಾತನಾಡಿ, ಅಭಿವೃದ್ಧಿಯ ಹರಿಕಾರರಾಗಿ ಹಿಂದು ಪರ ಚಿಂತನೆಯಮೂಲಕ, ಸಮನ್ವಯಿ ಶಾಸಕನ ಬೆಳವಣಿಗೆ ಸಹಿಸಿಕೊಳ್ಳದ ದುಷ್ಕರ್ಮಿಗಳು ಈ ಸಂಚು ರೂಪಿಸಿದ್ದಾರೆ. ಇತ್ತೀಚಿನ ಬೆಳವಣಿಗೆಯನ್ನು ಗಮನಿಸಿದಾಗ ರಾಷ್ಟ್ರೀಯ ತನಿಖಾದಳದ ತನಿಖೆಯಿಂದ ದುಷ್ಕರ್ಮಿಗಳ ಅಡಿತಪ್ಪಿದಂತಾಗಿದೆ. ಇದರಿಂದಾಗಿ ಇಂತಹ ಕೃತ್ಯಗಳಿಗೆ ಮುಂದಾಗುತ್ತಿದ್ದಾರೆ ಎಂದು ಆರೋಪಿಸಿದರು. ಶಾಸಕರಿಗೆ ಸರಕಾರ ಕೂಡಲೇ ಸೂಕ್ತ ರಕ್ಷಣೆ ನೀಡಬೇಕು, ಆರೋಪಿಗಳಿಗೆ ಕಠಿಣ ನೀಡಬೇಕು ಎಂದು ಆಗ್ರಹಿಸಿದರು.

ಬಳಿಕ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ ನಂದಕುಮಾರ್ ಎಂ.ಎಂ. ಅವರಿಗೆ ಮನವಿ ಸಲ್ಲಿಸಲಾಯಿತು. ಪ.ಪಂ. ಅಧದ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಟ್ರಸ್ಟಿ ಪ್ರಸನ್ನಾ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ್, ಜಿಲ್ಲಾ ಎಸ್.ಟಿ.ಮೋರ್ಚಾ ಅಧ್ಯಕ್ಷ ಚೆನ್ನಕೇಶ್ ಅರಸಮಜಲು, ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ನಾವೂರು, ಸೀತಾರಾಮ್ ಬೆಳಾಲು, ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಸಮಿತಿ ಸದಸ್ಯ ಬಾಲಕೃಷ್ಣ ಶೆಟ್ಟಿ, ವಿಹಿಂಪ ಪುತ್ತೂರು ಜಿಲ್ಲಾ ಉಪಾಧ್ಯಾಕ್ಷ ಭಾಸ್ಕರ್ ಧರ್ಮಸ್ಥಳ, ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆಂರ್ಬುಡ, ಬಿಎಂಎಸ್ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ಯುವ ಮೋರ್ಚಾ ಅಧ್ಯಕ್ಷ ಯಶವಂತ್ ಬೆಳಾಲು, ಒಬಿಸಿ ಮೋರ್ಚಾ ಅಧ್ಯಕ್ಷ ಪ್ರಭಾಕರ್ ಸವಣಾಲು, ಮಂಡಲ ಪದಾಧಿಕಾರಿಗಳು, ಶಕ್ತಿ ಕೇಂದ್ರ ಪ್ರಮುಖರು, ವಿವಿಧಮೋರ್ಚಾ ಪದಾಧಿಕಾರಿಗಳು, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು