News Karnataka Kannada
Thursday, May 02 2024
ಮಂಗಳೂರು

ಬಂಟ್ವಾಳ: ಬಿಸಿಎಂ ವಿದ್ಯಾರ್ಥಿ ನಿಲಯದ ಪಿಯುಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿದ್ದಾರೆ.
Photo Credit : Pexels

ಬಂಟ್ವಾಳ: ತಾಲೂಕು ಅಜ್ಜಿಬೆಟ್ಟು ಗ್ರಾಮದ ವಾಮದಪದವಿನಲ್ಲಿರುವ ಸ.ಪ.ಪೂ ಕಾಲೇಜಿನ ಬಿಸಿಎಂ ವಿದ್ಯಾರ್ಥಿ ನಿಲಯದ ಪಿಯುಸಿ ವಿದ್ಯಾರ್ಥಿಗಳಿಗೆ ಅದೇ ವಿದ್ಯಾರ್ಥಿ ನಿಲಯದ ಪದವಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಜು.೨೦ರಂದು ಸಂಭವಿಸಿದ್ದು, ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿದ್ಯಾರ್ಥಿ ನಿಲಯದಲ್ಲಿ ವಾಮದಪದವು ಪದವಿ ಪೂರ್ವ ಕಾಲೇಜಿನ ೧೪ ವಿದ್ಯಾರ್ಥಿಗಳು ವಾಸವಿದ್ದು, ರಾತ್ರಿ ಗಂಟೆ ೯.೩೦ ರ ಬಳಿಕ ಇವರಿಗೆ ವಾಮದಪದವು ಪದವಿ ಕಾಲೇಜಿನ ವಿದ್ಯಾರ್ಥಿಗಳಾದ ಶರತ್ ಎಸ್., ಅಭಿಷೇಕ್, ಸುದೀಪ್, ರಾಕೇಶ್ ಹಾಗೂ ಸಂಗಡಿಗರು ಸೇರಿ ಬೆಲ್ಟ್, ವಿಕೆಟ್ ಗಳಿಂದ ಹಲ್ಲೆ ಮಾಡಿ, ಈ ಬಗ್ಗೆ ಯಾರಿಗಾದರೂ ದೂರು ನೀಡಿದರೆ ಮತ್ತೆ ಹೊಡೆಯುವುದಾಗಿ ಜೀವ ಬೆದರಿಕೆ ಹಾಕಿದ್ದರು.

ಹಲ್ಲೆಯಿಂದ ಗಾಯಗೊಂಡ ವಿದ್ಯಾರ್ಥಿಗಳನ್ನು ಪ.ಪೂ.ಕಾಲೇಜಿನ ಪ್ರಾಂಶುಪಾಲ ಶ್ರೀಧರ ಎಚ್.ಜಿ. ಅವರು  ವಾಮದಪದವು ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸಗಾಗಿ ಕಳುಹಿಸಿದ್ದರು. ಘಟನೆ ಕುರಿತು ಅವರು ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿದ್ಯಾರ್ಥಿ ನಿಲಯದಲ್ಲಿ ಖಾಯಂ ವಾರ್ಡನ್ ಇರದಿರುವುದೇ ವಿದ್ಯಾರ್ಥಿಗಳ ಸ್ವೇಚ್ಛಾಚಾರಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಬಿಸಿಎಂ ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದು, ವಿದ್ಯಾರ್ಥಿಗಳನ್ನು ವಿದ್ಯಾರ್ಥಿನಿಲಯದಿಂದ ಡಿಬಾರ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು