Categories: ಮಂಗಳೂರು

ಪುಣ್ಯಕೋಟಿನಗರ: ಗೋ ಸೇವಾ ಮಾಸಾಚರಣೆ ವಿಜ್ರಂಭಿಸಿದ ಶೋಭಾಯಾತ್ರೆ

ಪುಣ್ಯಕೋಟಿನಗರ: ಹಿಂದಿನ ಕಾಲದಲ್ಲಿ ನಮ್ಮ ಪೂರ್ವಜರು ಮನೆಯಲ್ಲಿ ಎಷ್ಟು ಗೋವುಗಳಿವೋ ಅದಕ್ಕೆ ಅನುಸಾರವಾಗಿ ವ್ಯಕ್ತಿಯ ಶ್ರಿಮಂತಿಕೆಯನ್ನು ಗುರುತಿಸುತ್ತಿದ್ದರು. ಆದರೆ ಈಗ ಕಾರು ಬಂಗಲೆಯ ಮೂಲಕ ಶ್ರೀಮಂತಿಕೆಯನ್ನು ಗುರುತಿಸುವಂತಾಗಿದೆ. ಗೋವಿಗೆ ನಮ್ಮ ಮನೆಯಲ್ಲಿ ನಮ್ಮ ಮನದಲ್ಲೂ ಜಾಗ ಕೊಡಬೇಕು. ಪುಣ್ಯಕೋಟಿನಗರದಲ್ಲಿ ನಡೆಯುವ ಗೋಸೇವೆ ಮಾದರಿಯಾಗಿದೆ. ಇದು ಗೋವೆಗೆ ಉತ್ತೇಜನ, ಜಾಗೃತಿ ಮೂಡಿಸಲು ಪ್ರೇರಣೆ‌ ನೀಡಿದಂತಾಗಿದೆ ಎಂದು ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಅವರು ಕೈರಂಗಳದ ಪುಣ್ಯಕೋಟಿನಗರದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ ಜ.14 ರಿಂದ ಪೆ. 13 ರ ವರಗೆ ಒಂದು ತಿಂಗಳ ಕಾಲ ವಿವಿಧ ಧಾರ್ಮಿಕ ಮತ್ತಿ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ನಡೆಯಲಿರುವ ಗೋಸೇವಾ ಮಾಸಾಚರಣೆ ಉದ್ಘಾಟನೆ ಕಾರ್ಯಕ್ರಮದಲ್ಕಿ ಆಶೀರ್ವಚನ ನೀಡಿದರು.

ಎಲ್ಲಾ ರೀತಿಯ ರಕ್ಷಣೆಯಲ್ಲಿ ಗೋವಿನ ಸಂರಕ್ಷಣೆಯೇ ಎಲ್ಲದಕ್ಕೂ ಅಡಿಪಾಯ.‌ ಗೋವಿಗೆ ಪ್ರಾಚೀನ ಪರಂಪರೆ ಅತ್ಯಂತ ಮಹತ್ವ ನೀಡಿತ್ತು. ಗೋಮಾತೆಯ ದರ್ಶನ, ಸೇವೆಯಿಂದ ನಮಗೆ ಪುಣ್ಯಪ್ರಾಪ್ತಿಯಾಗುತ್ತದೆ.‌ ಗೋವನ್ನು ನಿರ್ಲಕ್ಷಿಸುವುದು ಅಪಾಯಕಾರಿ ಎಂದರು.

ಮುಂಬೈ ಉದ್ಯಮಿ ಸದಾಶಿವ ಶೆಟ್ಟಿ ಕೂಳೂರು, ಕನ್ಯಾನ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗೋವಿಗೆ ಸನಾತನ ಧರ್ಮದಲ್ಲಿ ಅತ್ಯಂತ ಮಹತ್ವತೆ ಇದೆ. ಇಂದು ಕಾಲ ಬದಲಾಗುತ್ತಿದ್ದು ಎಲ್ಲಿಯೂ ಗೋವಿನ ಮಾಸಾಚರಣೆ ನಡೆಯುತ್ತಿಲ್ಲ. ಬದಲಾಗಿ ಮಾಂಸಾಚರಣೆಯೇ ನಡೆಯುತ್ತಿದೆ. ಗೋವು ಎಂದರೆ ಮುಗ್ಧ ಹಾಗೂ ಪಾವಿತ್ರ್ಯವುಳ್ಳ ದೇವತೆ. ಗೋವಿನ ರಕ್ಷಣೆ ನಮ್ಮೆಲ್ಲರ ಜವಬ್ಧಾರಿ. ಕೈರಂಗಳ ಪುಣ್ಯಕೋಟಿನಗರದಲ್ಲಿ‌ ನಡೆಯುತ್ತಿರುವ ಗೋವಿನ ಮಾಸಾಚರಣೆಯಂತಹ ಈ ಕಾರ್ಯಕ್ರಮದ ಮೂಲಕ ಗೋವಿನ ಸಂರಕ್ಷಣೆಗಾಗಿ ಪಣತೊಡೋಣ‌ ಎಂದು ಹೇಳಿದರು.

ಭಾರತ ದೇಶ ಹಿಂದೂ ದೇಶವಾಗಿದ್ದುಕೊಂಡು ಗೋವಿನ ಪೂಜೆ ಮಾಡುತ್ತೇವೆ. ಬ್ರಿಟನ್ ನಲ್ಲಿ ಭಾರತದ ಮೂಲದ ವ್ಯಕ್ಯಿಯೇ ಪ್ರಧಾನಿಯಾಗಿದ್ದಾರೆ. ಅವರು ಅಲ್ಲಿ ಗೋ ಪೂಜೆಯ ನಡೆಸಿ ಮಾದರಿಯಾಗಿದ್ದಾರೆ. ರಾಜಾರಾಂ ಭಟ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಪುಣ್ಯ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಹಾಗೂ ಪ್ರತೀ ವರ್ಷ ಇಂತಹ ಕಾರ್ಯಕ್ರಮ ನಡೆಯುವಂತಾಗಲಿ ಎಂದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹಿಂದೂ ಜಾಗರಣ ವೇದಿಕೆಯ ನರಸಿಂಹ ಮಾಣಿ , ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾದ ಸಂತೋಷ್ ಕುಮಾರ್ ಬೋಳಿಯಾರ್, ಜಯ ಕಂಬಳ ಪದವು, ಉದ್ಯಮಿ ರಾಧಾಕೃಷ್ಣ ಉಮಿಯ, ಬಿಜೆಪಿ ಮುಖಂಡರಾದ ಸೀತಾರಾಮ ಬಂಗೇರ, ಚಂದ್ರಶೇಖರ ಉಳ್ಳಾಲ್, ಸುರೇಶ್ ದೇರಾಜೆ, ಬಂಟ್ವಾಳ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಯಶವಂತ್ ದೇರಾಜೆ, ಮಾಜಿ ತಾಲೂಕು ಪಂಚಾಯತಿ ಸದಸ್ಯ ನವೀನ್ ಪಾದಲ್ಪಾಡಿ, ಮೊದಲಾದವರು ಉಪಸ್ಥಿತರಿದ್ದರು.

ಸಂಚಾಲಕ ಟಿ.ಜಿ ರಾಜಾರಾಮ್ ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯಕ್ರಮಲ್ಲಿ ಶ್ರೀನಿವಾಸ್ ಭಟ್ ಸೇರಾಜೆ, ಅರವಿಂದ ಭಟ್ ಕೊಲ್ಲರಮಜಲು , ನಿರ್ಮಲ್ ಭಟ್ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಮಜಿ ಶ್ರೀ ಮಹಮ್ಮಾಯಿ ಸೇವಾ ಸಮಿತಿಯಿಂದ ಭಜನೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಆರ್ಯಭಟ ಪ್ರಶಸ್ತಿ ಪುರಸ್ಕøತ ಪುತ್ತೂರು ಜಗದೀಶ್ ಆಚಾರ್ಯ ಬಳಗದವರಿಂದ ಸಂಗಿತ ಗಾನ ಸಂಭ್ರಮ ನಡೆಯಿತು.

ಶೋಭಾಯಾತ್ರೆ

ಕೈರಂಗಳದ ಪುಣ್ಯಕೋಟಿನಗರದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ಗೋಸೇವಾ ಮಾಸಾಚರಣೆಯ ಕಾರ್ಯಕ್ರಮವು ಶನಿವಾರದಿಂದ ಆರಂಭಗೊಂಡಿದ್ದು, ಕಾರ್ಯಕ್ರಮದ ಉದ್ಗಾಟನೆಯ ಮುನ್ನ ಮುಡಿಪುವಿನಿಂದ‌ ಹೂಹಾಕುವಕಲ್ಲು ಮಾರ್ಗವಾಗಿ ಪುಣ್ಯಕೋಟಿನಗರಕ್ಕೆವರೆಗೆ ನಡೆದ ಭವ್ಯವಾದ ಶೋಭಾಯಾತ್ರೆಯು ವಿವಿಧ ಸಾಂಸ್ಕೃತಿಕ ವೈಭವದೊಂದಿಗೆ ವಿಜ್ರಂಭಣೆಯಿಂದ‌ ನಡೆಯಿತು.

ಮೆರವಣಿಗೆಯಲ್ಲಿ ಭಜನಾ ತಂಡಗಳು, ಕಲ್ಲಡ್ಕದ ಗೊಂಬೆ, ಚಿತ್ರದುರ್ಗದ ಬ್ರಾಸ್ ಬ್ಯಾಂಡ್, ಘಟೋತ್ಗಚ ವೇಷ, ಟ್ಯಾಬ್ಲೋ, ಮಂಗಳವಾದ್ಯ, ಹುಲಿವೇಷ, ಸಿಂಗಾರಿ ಮೇಳ,ತಾಲೀಮು ಪ್ರದರ್ಶನ ಹಾಗೂ ವಿವಿಧ ವೈವಿಧ್ಯಗಳೊಂದಿಗೆ ನಡೆಯಿತು. ವಿಶೇಷವಾಗಿ ನಾಲ್ಕು ಟ್ರಕ್ ಗಳ ಮೂಲಕ ಸಾಗಿ ನೂರಾರು ರಾಧಾ ಕೃಷ್ಣ ವೇಷಧಾರಿ ಮಕ್ಕಳು, ಕುಣಿತ ಭಜನೆಯೊಂದಿಗೆ ನಡೆದ ಸಾವಿರಾರು ಮಂದಿಯ ಪಾಲ್ಗೊಲ್ಲುವಿಕೆಯ ಮೂಲಕ ನಡೆದ ಶೋಭಾಯಾತ್ರೆಯು ಮುಡಿಪುವಿನಲ್ಲಿ ಇತಿಹಾಸ ಸೃಷ್ಟಿಸಿತು.

Sneha Gowda

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

1 hour ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago