Categories: ಮಂಗಳೂರು

ಚರಂಡಿಗೆ ಬಿದ್ದ ಕಾರು ಮೇಲಕ್ಕೆತ್ತಲು ನೆರವಾದ ಪುತ್ತಿಲ: ಜಾಲತಾಣದಲ್ಲಿ ವಿಡಿಯೋ ವೈರಲ್‌

ಪುತ್ತೂರು: ಗುರುವಾರ ತಡರಾತ್ರಿ ಮುಸ್ಲಿಂ ವ್ಯಕ್ತಿಯ ಕಾರನ್ನು ಚರಂಡಿಯಿಂದ ಮೇಲಕ್ಕೆತ್ತಲು ಅರುಣ್ ಪುತ್ತಿಲ ನೆರವಾಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹಿಂದೂ ನಾಯಕರೆಂದರೆ ಮುಸ್ಲಿಂ ಧರ್ಮದ ವಿರೋಧಿಗಳು ಅನ್ನುವಂತಹ ವಾತಾವರಣ ಸಮಾಜದಲ್ಲಿರುವಾಗ ಅರುಣ್ ಪುತ್ತಿಲ ಅವರ ಈ ನಡೆ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.

ಸೂರಿಕುಮೇರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚರಂಡಿಗೆ ರಾತ್ರಿ ಅನ್ಯ ಧರ್ಮದವರ ಕಾರೊಂದು ಬಿದ್ದಿದೆ. ಈ ವೇಳೆ ಅದೇ ಮಾರ್ಗವಾಗಿ ಮಂಗಳೂರಿನಿಂದ ತುರ್ತು ಕಾರ್ಯಕ್ರಮಕ್ಕೆ ಪುತ್ತೂರಿಗೆ ಪುತ್ತಿಲರು ಆಗಮಿಸುತ್ತಿದ್ದರು. ತಡ ರಾತ್ರಿ 10.45 ಕ್ಕೆ ಕಾರೊಂದು ಚರಂಡಿಗೆ ಬಿದ್ದಿದ್ದನ್ನು ಅರುಣ್ ಪುತ್ತಿಲ ಗಮನಿಸಿದ್ದಾರೆ. ತಕ್ಷಣ ಕಾರನ್ನು ನಿಲ್ಲಿಸಿ ತನ್ನ ಕಾರಲ್ಲಿದ್ದ ಆಪ್ತರೊಂದಿಗೆ ಸೇರಿ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದಾರೆ.

Ashika S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

1 hour ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

1 hour ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

2 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

2 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

3 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

3 hours ago