News Karnataka Kannada
Thursday, May 02 2024
ಮಂಗಳೂರು

ಪುತ್ತೂರು: ದಲಿತ ಕಾಲನಿಗೆ ಅಶೋಕ್ ರೈ ಭೇಟಿ, ಮತ ಯಾಚನೆ

Puttur: Ashok Rai visits Dalit colony to seek votes
Photo Credit : News Kannada

ಪುತ್ತೂರು: ಅರಿಯಡ್ಕ ಗ್ರಾಮದ ಶೇಕಮಲೆ ದಲಿತ ಕಾಲನಿಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭೇಟಿ ನೀಡಿ ಮತ ಯಾಚನೆ ನಡೆಸಿದರು.

ಕಾಲನಿಗೆ ತೆರಳುವ ರಸ್ತೆಯಲ್ಲಿ ಹೊಳೆ ಇದ್ದು ಅದಕ್ಕೆ ಸೇತುವೆ ಇಲ್ಲದೆ ಸಮಸ್ಯೆಯಾಗಿದ್ದು ಮಳೆಗಾಲದಲ್ಲಿ ಶಾಲೆಗೆ ಮಕ್ಕಳು ತೆರಳಲೂ ಸಾಧ್ಯವಾಗುತ್ತಿಲ್ಲ. ಸೇತುವೆ ನಿರ್ಮಾಣ ಮಾಡಿಕೊಡುವಂತೆ ಕಾಲನಿ ನಿವಾಸಿಗಳು ಮನವಿ ಮಾಡಿದರು. ಮನವಿ ಸ್ವೀಕರಿಸಿ ಮಾತನಾಡಿದ ಅಶೋಕ್ ರೈಯವರು ಇಲ್ಲಿ ಇಷ್ಟೊಂದು ಅಪಾಯಕಾರಿಯಾದ ಸ್ಥಳವಿದ್ದರೂ ಸೂಕ್ತ ಸ್ಪಂದನೆ ಸಿಗದೇ ಇದ್ದದ್ದು ಅತ್ಯಂತ ಬೇಸರದ ಸಂಗತಿಯಾಗಿದೆ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ನಿಮ್ಮ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯರಾದ ಸಾರ್ಥಕ್ ರೈ, ಅಶೋಕ್ ಪೂಜಾರಿ ಬೊಳ್ಳಾಡಿ, ಅರಿಯಡ್ಕ ಗ್ರಾಪಂ ಸದಸ್ಯೆ ವಿನಿತಾ, ಅಶೋಕ್ ರೈ ದೇರ್ಲ, ಮಜೀದ್ ಬಾಳಯ, ಕೂಂಜಿರ, ಕೇಶವ, ಗಣೇಶ, ಶಿವಪ್ಪ, ನಾರಾಯಣ ಎಸ್, ಲೋಕೇಶ, ಕೇಶವ, ಸತೀಶ್, ಬೂತ್ ಅಧ್ಯಕ್ಷ ಹರೀಶ್ ಬಿ.ಕೆ, ಇಸುಬು ಹಾಜಿ ಬಂಡಸಾಲೆ, ಬಶೀರ್ ಕೌಡಿಚ್ಚಾರ್, ಅಶ್ರಫ್ ಸನ್ ಶೈನ್ ಸೇರಿದಂತೆ ಸ್ಥಳೀಯ ಕಾಲನಿ ನಿವಾಸಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು